ADVERTISEMENT

ಗದಗ: ಖಾದಿ ಮಂಡಳಿ ಅಧಿಕಾರಿ ಎಸಿಬಿ ಬಲೆಗೆ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2018, 10:00 IST
Last Updated 16 ಅಕ್ಟೋಬರ್ 2018, 10:00 IST
   

ಗದಗ: ಪಿ.ಎಂ.ಇ.ಜಿ.ಪಿ. ಯೋಜನೆಯಡಿ ರೆಡಿಮೇಡ್ ಗಾರ್ಮೆಂಟ್ಸ್ ಸ್ವಯಂ ಉದ್ಯೋಗ ಕೈಕೊಳ್ಳಲು ₹1.75 ಲಕ್ಷ ಮಂಜೂರು ಮಾಡುವುದಾಗಿ ಹೇಳಿ, ಇದಕ್ಕೆ ಪ್ರತಿಯಾಗಿ ₹10 ಸಾವಿರ ಲಂಚ ಪಡೆಯುತ್ತಿದ್ದ ಅಧಿಕಾರಿಯನ್ನು ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಪೊಲೀಸರು ಸೋಮವಾರ ನಗರದಲ್ಲಿ ವಶಕ್ಕೆ ಪಡೆದಿದ್ದಾರೆ.

ಜಿಲ್ಲಾ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಅಧಿಕಾರಿ ನರೀಯಪ್ಪ ಗುರುಸೋಮಪ್ಪ ಹುನಗುಂದ(53) ಬಂಧಿತ ಆರೋಪಿ.

ಅವರ ವಿರುದ್ಧ ಕುರ್ತಕೋಟಿ ಗ್ರಾಮದ ನಿವಾಸಿ ಮಹಾಂತೇಶ ಚಂದ್ರಶೇಖರ ಮದ್ನೂರ ಎಂಬುವರು ಎಸಿಬಿಗೆ ದೂರು ನೀಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.