ನರಗುಂದ: ‘ಕೆಂಪೇಗೌಡ ನಾಡು ಕಂಡಂತಹ ಉತ್ತಮ ಆಡಳಿತಗಾರರು. ಕನ್ನಡ ನಾಡಿನ ಅಭಿವೃದ್ಧಿಯಲ್ಲಿ ಅವರ ಪಾತ್ರ ಅಪಾರ’ ಎಂದು ಪ್ರಾಚಾರ್ಯ ಕೆ.ಎಂ. ಮಾಕಣ್ಣವರ ಹೇಳಿದರು.
ತಾಲ್ಲೂಕಿನ ಕೊಣ್ಣೂರ ಕೆ.ಇ.ಎಸ್ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಎನ್.ಎಸ್.ಎಸ್ ಘಟಕದ ಆಶ್ರಯದಲ್ಲಿ ಶನಿವಾರ ನಡೆದ ನಾಡಪ್ರಭು ಕೆಂಪೇಗೌಡರ ದಿನಾಚರಣೆಯಲ್ಲಿ ಮಾತನಾಡಿದರು.
ಎ.ಕೆ. ಬಂಡಗರ ಉಪನ್ಯಾಸ ನೀಡಿದರು. ಹೆಚ್.ಎಸ್. ಶಿವಪ್ಪಯ್ಯನಮಠ, ಎಂ.ಡಿ. ಚಲವಾದಿ ಇದ್ದರು. ಕೆಂಪೇಗೌಡರ ಜಯಂತಿಯ ಅಂಗವಾಗಿ ಚಿತ್ರಕಲೆ ಹಾಗೂ ರಸಪ್ರಶ್ನೆ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಚಿತ್ರಕಲಾ ಸ್ಪರ್ಧೆಯಲ್ಲಿ ಕೌಶಲ್ಯ ಹಣಗಿ ಪ್ರಥಮ , ರಸಪ್ರಶ್ನೆ ಸ್ಪರ್ಧೆಯಲ್ಲಿ ಕಮಲಾ ಬಿಜಾಪುರ ಹಾಗೂ ಸಂಗಡಿಗರು ಪ್ರಥಮ ಸ್ಥಾನ ಪಡೆದು ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.