ಶಿರಹಟ್ಟಿ (ಗದಗ ಜಿಲ್ಲೆ): ತಾಲ್ಲೂಕಿನ ಮಾಚೇನಹಳ್ಳಿ ಗ್ರಾಮದ ಬಾಲಕಿ ಬೇಬಿ ವಿಠ್ಠಲ್ ತುಮ್ಮಿನಕಟ್ಟಿ(13) ಬುಧವಾರ ಮೃತಪಟ್ಟಿದ್ದು ಡೆಂಗಿಯಿಂದ ಸಾವಿಗೀಡಾಗಿರುವ ಶಂಕೆ ವ್ಯಕ್ತವಾಗಿದೆ.
ಈ ಕುರಿತು ‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಮುಖಂಡ ಶಂಕರ ಮರಾಠೆ ‘ಎರಡು ದಿನಗಳ ಹಿಂದೆಯಷ್ಟೇ ಮಾಚೇನಹಳ್ಳಿ ಗ್ರಾಮದ ಬಾಲಕಿಯನ್ನು ಡೆಂಗಿ ಜ್ವರ ಎಂದು ತಾಲ್ಲೂಕು ಆಸ್ಪತ್ರೆಯಿಂದ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿತ್ತು. ಜಿಲ್ಲಾಸ್ಪತ್ರೆಯಲ್ಲಿನ ವೈದ್ಯರ ನಿಷ್ಕಾಳಜಿಯಿಂದ ಬಾಲಕಿಯನ್ನು ಬಲಿ ತೆಗೆದುಕೊಂಡಿದೆ. ವೈದ್ಯರು ಇಂತಹ ಪ್ರಕರಣಗಳನ್ನು ಹಗುರವಾಗಿ ತೆಗೆದುಕೊಳ್ಳುವುದಲ್ಲದೆ ನಿಯಮಿತವಾಗಿ ಚಿಕಿತ್ಸೆ ಹಾಗೂ ಔಷಧಿ ನೀಡುತ್ತಿಲ್ಲ. ಈ ಕುರಿತು ಜಿಲ್ಲಾಡಳಿತವಾಗಲಿ, ಜಿಲ್ಲಾ ಉಸ್ತುವಾರಿ ಸಚಿವರಾಗಲಿ ಕ್ರಮ ತೆಗೆದುಕೊಳ್ಳುತ್ತಿಲ್ಲ’ ಎಂದು ಆರೋಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.