ಗದಗ: ಗುರುಕುಲ ಕಲಾ ಪ್ರತಿಷ್ಠಾನ ತುಮಕೂರು ಕೇಂದ್ರ ಸಮಿತಿ ವತಿಯಿಂದ ಯೋಗ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ನೀಡುವ ‘ಗುರುಕುಲ ಪತಂಜಲಿ ಯೋಗ’ ಪ್ರಶಸ್ತಿಗೆ ಗದಗ ಜಿಲ್ಲೆಯ ಪಾಪನಾಶಿ ಗ್ರಾಮದ ಯೋಗ ಸಾಧಕಿ ಸುಧಾ ಪಾಟೀಲ ಆಯ್ಕೆಯಾಗಿದ್ದಾರೆ.
ವಿಜಯನಗರ ಜಿಲ್ಲೆಯ ಹಂಪಿ ವಿರೂಪಾಕ್ಷ ದೇವಾಲಯ ಹತ್ತಿರವಿರುವ ಕೊಟ್ಟೂರೇಶ್ವರ ಸಂಸ್ಥಾನ ಮಠದಲ್ಲಿ ಸುವರ್ಣ ಕರ್ನಾಟಕ ಸಂಭ್ರಮದ ಸವಿನೆನಪಿಗಾಗಿ ನ.19ರಂದು ನಡೆಯಲಿರುವ 3ನೇ ಗುರುಕುಲ ಕಲಾ ಸಮ್ಮೇಳನದಲ್ಲಿ ಬಸವಲಿಂಗ ಸ್ವಾಮೀಜಿ ಸಾನ್ನಿಧ್ಯದಲ್ಲಿ, ಮಾತೆ ಮಂಜಮ್ಮ ಜೋಗತಿ ಇವರ ಗೌರವ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಗುರುಕುಲ ಕಲಾ ಪ್ರತಿಷ್ಠಾನದ ಸಂಸ್ಥಾಪಕ ಅಧ್ಯಕ್ಷ ಹುಲಿಯೂರುದುರ್ಗದ ನಾರಾಯಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.