ಗದಗ: ‘ಬಿಜೆಪಿ, ಜೆಡಿಎಸ್ನದ್ದು ಅಪವಿತ್ರ ಮೈತ್ರಿ. ಈ ಎರಡೂ ಪಕ್ಷಗಳಿಗೆ ಸಾರ್ವಜನಿಕರ ಎದುರಿಗೆ ತಮ್ಮ ಪ್ರಾಮಾಣಿಕ ಅಭಿಪ್ರಾಯವನ್ನು ತಿಳಿಸುವ ಶಕ್ತಿ ಇಲ್ಲ’ ಎಂದು ಶಾಸಕ ಎಚ್.ಕೆ.ಪಾಟೀಲ ಲೇವಡಿ ಮಾಡಿದರು.
ನಗರದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ಧಾರವಾಡ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ಗೆ ನಡೆಯುವ ಚುನಾವಣೆಯಲ್ಲಿ ಹಾವೇರಿ, ಧಾರವಾಡ ಮತ್ತು ಗದಗ ಜಿಲ್ಲೆಗಳಿಂದ ಒಟ್ಟು 7,500 ಮತದಾರರು ಇದ್ದಾರೆ. ಈ ಪೈಕಿ ಗದಗ ಜಿಲ್ಲೆಯಲ್ಲಿ 1,965 ಮಂದಿ ಮತದಾರರು ಇದ್ದು, ಎಲ್ಲರೂ ಕಾಂಗ್ರೆಸ್ ಬೆಂಬಲಿಸಲಿದ್ದಾರೆ’ ಎಂದರು.
‘73 ಮತ್ತು 74ನೇ ತಿದ್ದುಪಡಿ ಮೂಲಕ ಸ್ಥಳೀಯ ಸಂಸ್ಥೆಗಳನ್ನು ಬಲಿಷ್ಠಗೊಳಿಸುವ ಕೆಲಸ ಮಾಡಲಾಗಿದೆ. ಈ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಎಷ್ಟು ಮತಗಳು ಬೇಕೋ ಅದಕ್ಕಿಂತಲೂ ಹೆಚ್ಚು ಮತಗಳು ಸಿಗಲಿವೆ. ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್ ಅವರು 1,200ಕ್ಕೂ ಅಧಿಕ ಪ್ರಥಮ ಪ್ರಾಶಸ್ತ್ಯದ ಮತಗಳನ್ನು ಪಡೆಯುವ ವಿಶ್ವಾಸ ಇದೆ’ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.