ADVERTISEMENT

ಸುಧಾಮೂರ್ತಿಗೆ ‘ಮಾನವತಾವಾದಿ ಬಸವೇಶ್ವರ ಪ್ರಶಸ್ತಿ’

​ಪ್ರಜಾವಾಣಿ ವಾರ್ತೆ
Published 30 ಏಪ್ರಿಲ್ 2022, 19:49 IST
Last Updated 30 ಏಪ್ರಿಲ್ 2022, 19:49 IST
ಸುಧಾಮೂರ್ತಿ
ಸುಧಾಮೂರ್ತಿ   

ಗದಗ: ಜಿಲ್ಲೆಯ ಲಕ್ಷ್ಮೇಶ್ವರದ ಲಿಂಬಯ್ಯಸ್ವಾಮಿ ಪ್ರತಿಭಾ ಪ್ರತಿಷ್ಠಾನ ನೀಡುವ 2022ನೇ ಸಾಲಿನ ‘ಮಾನವತಾವಾದಿ ಬಸವೇಶ್ವರ ಪ್ರಶಸ್ತಿ’ಗೆ ಇನ್ಫೋಸಿಸ್‍ನ ಸುಧಾಮೂರ್ತಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಶಿವಪ್ರಕಾಶ ಲಿಂಬಯ್ಯಸ್ವಾಮಿಮಠ ಹೇಳಿದ್ದಾರೆ.

ಡಾ. ಸುಧಾಮೂರ್ತಿ ಅವರ ಸಾಮಾಜಿಕ ಸೇವೆ ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಗದುಗಿನ ತೋಂಟದಾರ್ಯ ಮಠದಲ್ಲಿ ಮೇ 2ರಂದು ನಡೆಯುವ ಕಾರ್ಯಕ್ರಮದಲ್ಲಿ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಅವರುಡಾ.ಸುಧಾಮೂರ್ತಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡುವರು. ಪ್ರಶಸ್ತಿಯು ₹1 ಲಕ್ಷ ನಗದು, ತಾಮ್ರಫಲಕ ಒಳಗೊಂಡಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT