ADVERTISEMENT

ಅಕ್ರಮ ಪಡಿತರ ಅಕ್ಕಿ ಸಾಗಣೆ: ಒಬ್ಬನ ಬಂಧನ

​ಪ್ರಜಾವಾಣಿ ವಾರ್ತೆ
Published 8 ಜನವರಿ 2021, 7:28 IST
Last Updated 8 ಜನವರಿ 2021, 7:28 IST
ಗದಗಿನ ಇಂಡಸ್ಟ್ರಿಯಲ್‌ ಏರಿಯಾದಲ್ಲಿ ಪೊಲೀಸರು ವಾಹನವನ್ನು ವಶಕ್ಕೆ ಪಡೆದರು
ಗದಗಿನ ಇಂಡಸ್ಟ್ರಿಯಲ್‌ ಏರಿಯಾದಲ್ಲಿ ಪೊಲೀಸರು ವಾಹನವನ್ನು ವಶಕ್ಕೆ ಪಡೆದರು   

ಗದಗ: ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ವಾಹನವನ್ನು ವಶಕ್ಕೆ ಪಡೆದಿರುವ ಗದಗ ಗ್ರಾಮೀಣ ಪೊಲೀಸರು ಘಟನೆಗೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರನ್ನು ಬಂಧಿಸಿದ್ದಾರೆ.

ಶನಿವಾರ 112 ತುರ್ತು ಸಹಾಯವಾಣಿಗೆ ವ್ಯಕ್ತಿಯೊಬ್ಬರು ಕರೆ ಮಾಡಿ ನೀಡಿದ ಮಾಹಿತಿಯಂತೆ ಇಆರ್‌ವಿ ತಂಡದವರು ಎಸ್‌ಪಿ ಯತೀಶ್‌ ಎನ್‌. ಅವರ ಮಾರ್ಗದರ್ಶನದಲ್ಲಿ ತಕ್ಷಣ ಕಾರ್ಯಾಚರಣೆಗೆ ಇಳಿದು, ನಗರದ ಹೊರವಲಯದಲ್ಲಿರುವ ಇಂಡಸ್ಟ್ರಿಯಲ್‌ ಏರಿಯಾದಲ್ಲಿ ವಾಹನವನ್ನು ವಶಕ್ಕೆ ಪಡೆದು ಗ್ರಾಮೀಣ ಠಾಣೆಯ ಪೊಲೀಸರಿಗೆ ಒಪ್ಪಿಸಿದ್ದಾರೆ.

ವಾಹನದಲ್ಲಿ 50 ಕೆ.ಜಿ.ಯ 80 ಚೀಲ ಪಡಿತರ ಅಕ್ಕಿ ಇತ್ತು. ಈ ವೇಳೆ ಪೊಲೀಸರು ವಾಹನದ ಚಾಲಕ ಸಿದ್ದಲಿಂಗಯ್ಯ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.