ADVERTISEMENT

ಅನಾಗರಿಕ ಟೀಕೆಗೆ ಉತ್ತರ ಕೊಡುವ ಸಾಮರ್ಥ್ಯ ಪಕ್ಷಕ್ಕಿದೆ: ಸಚಿವ ಕೋಟ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2021, 4:23 IST
Last Updated 3 ಸೆಪ್ಟೆಂಬರ್ 2021, 4:23 IST

ಗದಗ: ‘ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆರೋಗ್ಯ ಇಲಾಖೆ ಜತೆಗೆ ಸಭೆ ನಡೆಸಿ ನಿಯಮ ರೂಪಿಸಲಿದ್ದಾರೆ’ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಗುರುವಾರ ಮಾಧ್ಯಮ ಪ್ರತಿನಿಧಿಗಳ ಜತೆಗೆ ಮಾತನಾಡಿದ ಅವರು, ‘ಕೊರೊನಾ ಸಂದರ್ಭದಲ್ಲಿ ಯಾವುದೇ ಕಾರ್ಯಕ್ರಮ ಮಾಡಬೇಕಿದ್ದರೂ ಕೋವಿಡ್‌–19 ಮಾರ್ಗಸೂಚಿಗಳ ಅನುಸಾರವೇ ಮಾಡಬೇಕು. ಅದನ್ನು ಗಮನದಲ್ಲಿಟ್ಟುಕೊಂಡು ಗಣೇಶೋತ್ಸವ ಆಚರಣೆಗೆ ಅನುಮತಿ ನೀಡುವ ಭರವಸೆ ಇದೆ’ ಎಂದು ಹೇಳಿದರು.

ಶಾಸಕ ಎಚ್‌.ಡಿ.ಕುಮಾರಸ್ವಾಮಿ ಟೀಕೆಗೆ ಪ್ರತಿಕ್ರಿಯಿಸಿದ ಸಚಿವರು, ‘ಕುಮಾರಸ್ವಾಮಿ, ಸಿದ್ದರಾಮಯ್ಯ ಅವರು ಬಿಜೆಪಿ ಸರ್ಕಾರದ ಆಡಳಿತವನ್ನು ಸಮರ್ಥಿಸುತ್ತಾರೆ, ಸಂಘಟನೆಯನ್ನು ಸ್ವಾಗತಿಸುತ್ತಾರೆ ಎಂಬ ಭ್ರಮೆಯಲ್ಲಿ ನಾವಿಲ್ಲ. ಅವರ ಅನಾರೋಗ್ಯಕರ ಟೀಕೆಗೆ ಸಮಯ ಬಂದಾಗ ತಕ್ಕ ಉತ್ತರ ಕೊಡುವ ಸಾಮರ್ಥ್ಯ ಪಕ್ಷಕ್ಕಿದೆ’ ಎಂದು ಹೇಳಿದರು.

ADVERTISEMENT

ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ವ್ಯವಸ್ಥೆ ಕಲ್ಪಿಸಿಕೊಡಲು ಕ್ರಮವಹಿಸಲಾಗುವುದು ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.