ADVERTISEMENT

ಶಿರಹಟ್ಟಿ: ಕೆಸರು ಗದ್ದೆಯಂತಾದ ರಸ್ತೆ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2020, 5:22 IST
Last Updated 16 ಸೆಪ್ಟೆಂಬರ್ 2020, 5:22 IST
ಶಿರಹಟ್ಟಿ ಪಟ್ಟಣದ ವಿಜಯನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕೆಸರು ಗದ್ದೆಯಂತಾಗಿದೆ
ಶಿರಹಟ್ಟಿ ಪಟ್ಟಣದ ವಿಜಯನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕೆಸರು ಗದ್ದೆಯಂತಾಗಿದೆ   

ಶಿರಹಟ್ಟಿ: ಇತ್ತಿಚಿಗೆ ಸುರಿದ ಮಳೆಗೆ ಪಟ್ಟಣದ ವಿಜಯನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣವಾಗಿ ಹಾಳಾಗಿದೆ. ಕೆಸರು ಗದ್ದೆಯಂತಾದ ರಸ್ತೆಯಲ್ಲಿ ಸಂಚಾರವೇ ಸಾಧ್ಯವಿಲ್ಲ ಎಂದು ವಾಹನ ಸವಾರರು ಹೇಳುತ್ತಾರೆ.

ವಾಹನಗಳು ಮಾತ್ರವಲ್ಲ ನಡೆದುಕೊಂಡು ಹೋಗಲು ಸಹ ಹರಸಾಹಸ ಪಡಬೇಕಾದ ಸ್ಥಿತಿ ಇದೆ. ಜಾರಿ ಬಿದ್ದರೆ ಕೈಕಾಲು ಮುರಿಯುವುದು ಖಚಿತ ಎನ್ನುತ್ತಾರೆ ಸ್ಥಳೀಯರು.

ಮಳೆ ಬಂದರೆ ಕೆಸರು ಗದ್ದೆ, ಬೇಸಿಗೆ ಬಂದರೆ ದೂಳಿನಿಂದ ಆವೃತವಾಗುವ ರಸ್ತೆಯನ್ನು ಅಭಿವೃದ್ಧಿ ಮಾಡುವಂತೆ ಹಲವು ಬಾರಿ ಸಂಬಂಧ ಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿಕೊಂಡರು ಯಾವುದೇ ಪ್ರಯೋಜನವಾಗಿಲ್ಲ. ಜನಪ್ರತಿ
ನಿಧಿಗಳಿಗೆ ಜನರ ಸಮಸ್ಯೆ ಬಗೆಹರಿಸುವ ಮನಸ್ಸಿಲ್ಲ ಎಂದು ಇಲ್ಲಿನ ನಿವಾಸಿಗಳಾದ ಮಲ್ಲಿಕಾರ್ಜುನ, ಮುಸ್ತಾಕ ಶಿಗ್ಲಿ ಬೇಸರ ವ್ಯಕ್ತಪಡಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.