ADVERTISEMENT

ಬಿಆರ್‌ಟಿ: ಗಂಡಾನೆ ಸಾವು

​ಪ್ರಜಾವಾಣಿ ವಾರ್ತೆ
Published 16 ಜೂನ್ 2021, 15:50 IST
Last Updated 16 ಜೂನ್ 2021, 15:50 IST
ಬಿಆರ್‌ಟಿ ಅರಣ್ಯದಲ್ಲಿ ಪತ್ತೆಯಾದ ಗಂಡಾನೆಯ ಕಳೇಬರ
ಬಿಆರ್‌ಟಿ ಅರಣ್ಯದಲ್ಲಿ ಪತ್ತೆಯಾದ ಗಂಡಾನೆಯ ಕಳೇಬರ   

ಚಾಮರಾಜನಗರ: ಬಿಳಿಗಿರಿರಂಗನಾಥಸ್ವಾಮಿ ದೇವಾಲಯ ಹುಲಿ ಸಂರಕ್ಷಿತ ಪ್ರದೇಶದ ಕೆ.ಗುಡಿ ವಲಯದ ವ್ಯಾಪ್ತಿಯಲ್ಲಿ ಮಂಗಳವಾರ ಗಂಡಾನೆಯ ಕಳೇಬರ ಪತ್ತೆಯಾಗಿದೆ.

ಹುಲಿ ಸಂರಕ್ಷಿತ ಪ್ರದೇಶದ ಗಡಿಯಿಂದ 100 ಮೀಟರ್‌ ದೂರದಲ್ಲಿರುವ ಹಳ್ಳವೊಂದರಲ್ಲಿ ಮೃತದೇಹ ಪತ್ತೆಯಾಗಿದೆ. ಆನೆಗೆ 8ರಿಂದ 10 ವರ್ಷ ವಯಸ್ಸಾಗಿರಬಹುದು ಎಂದು ಅಂದಾಜಿಸಲಾಗಿದೆ. ಆನೆಯ ದೇಹದಲ್ಲಿ ಎಲ್ಲೂ ಗಾಯಗಳು ಕಂಡು ಬಂದಿಲ್ಲ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

‘ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಕಳಲೆಯನ್ನು (ಎಳೆ ಬಿದಿರು) ಮಿತಿಗಿಂತ ಹೆಚ್ಚು ಸೇವಿಸಿದ್ದರಿಂದ ದೇಹದಲ್ಲಿ ಸಯನೋಜೆನಿಕ್‌ ಗ್ಲೈಕೋಸೈಡ್‌ ಸಂಗ್ರಹವಾಗಿ, ಆನೆ ಮೃತಪಟ್ಟಿದೆ ಎಂದು ವರದಿ ತಿಳಿಸಿದೆ. ಕರುಳಿನ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ’ ಎಂದು ಬಿಆರ್‌ಟಿಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಜಿ.ಸಂತೋಷ್‌ಕುಮಾರ್ ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.