ಮಲೆಮಹದೇಶ್ವರ ಬೆಟ್ಟ: ಮಲೆಮಹದೇಶ್ವರ ಸ್ವಾಮಿ ದೇವಾಲಯದ ಹುಂಡಿಯಲ್ಲಿ ಸಂಗ್ರಹಣೆಯಾಗಿದ್ದ ಹಣ ಹಾಗೂ ಚಿನ್ನ, ಬೆಳ್ಳಿ ಪದಾರ್ಥಗಳ ಎಣಿಕೆ ಗುರುವಾರ ನಡೆಯಿತು.
ಸಾಲೂರು ಬೃಹನ್ಮಠಾಧ್ಯಕ್ಷ ಶಾಂತಮಲ್ಲಿಕಾರ್ಜುನ ಸ್ವಾಮೀಜಿ , ಪ್ರಾಧಿಕಾರದ ಕಾರ್ಯದರ್ಶಿ ರಘು, ನೇತೃತ್ವದಲ್ಲಿ ನಡೆದ ಹುಂಡಿ ಎಣಿಕೆಯಲ್ಲಿ 28 ದಿನಗಳಲ್ಲಿ ಒಟ್ಟು ₹ 1.64 ಕೋಟಿ ನಗದು, ಚಿನ್ನ 21 ಗ್ರಾಂ, ಬೆಳ್ಳಿ 2 ಕೆ.ಜಿ. ಸಂಗ್ರಹವಾಗಿದೆ. ಪ್ರಾಧಿಕಾರದ ಉಪ ಕಾರ್ಯದರ್ಶಿ ಚಂದ್ರಶೇಖರ ಜಿ.ಎಲ್., ಹಣಕಾಸು ಮತ್ತು ಲೆಕ್ಕ ಪತ್ರ ಸಲಹೆಗಾರರು ನಾಗೇಶ್ ಜಿಲ್ಲಾಡಳಿತ ಕಛೇರಿಯ ಶ್ವೇತಾ, ಪ್ರಾಧಿಕಾರದ ಸಿಬ್ಬಂದಿ, ಪೊಲೀಸ್ ಅಧಿಕಾರಿಗಳು , ಬ್ಯಾಂಕ್ ವ್ಯವಸ್ಥಾಪಕರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.