ಅಪಘಾತ
–ಪ್ರಾತಿನಿಧಿಕ ಚಿತ್ರ
ಮುಂಡರಗಿ: ಅತಿ ವೇಗದಿಂದ ಚಲಿಸುತ್ತಿದ್ದ ಬೈಕ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ತಾಲ್ಲೂಕಿನ ಹಳ್ಳಿಗುಡಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಮೃತ ವ್ಯಕ್ತಿ ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ದ್ಯಾಮನಕೊಪ್ಪ ಗ್ರಾಮದ ಗಣೇಶ ಸೋಮಪ್ಪ ನ್ಯಾರಲಘಂಟಿ ಎಂದು ತಿಳಿದುಬಂದಿದೆ. ಎಲ್ಲರೂ ಬೈಕ್ನಲ್ಲಿ ಹಾವೇರಿಯಿಂದ ಕೊಪ್ಪಳಕ್ಕೆ ಹೊರಟಿದ್ದರು.
ಒಂದೇ ಬೈಕ್ನಲ್ಲಿ ನಾಲ್ವರು ಪ್ರಯಾಣ ಮಾಡುತ್ತಿದ್ದ ಸಂದರ್ಭದಲ್ಲಿ ಅತಿಯಾದ ವೇಗದಿಂದ ಬೈಕ್ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ನಾಲ್ಕು ವರ್ಷದ ಮಗು ಸೇರಿದಂತೆ ಬೈಕ್ ಹಿಂಬದಿಯಲ್ಲಿ ಕುಳಿತಿದ್ದ ಮೂವರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಗದಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಮುಂಡರಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.