ADVERTISEMENT

ಹಣ್ಣಿನ ವ್ಯಾಪಾರಿ ಹತ್ಯೆ

​ಪ್ರಜಾವಾಣಿ ವಾರ್ತೆ
Published 20 ಜುಲೈ 2021, 6:28 IST
Last Updated 20 ಜುಲೈ 2021, 6:28 IST

ಗದಗ: ಹಣ್ಣಿನ ವ್ಯಾಪಾರಿ ಮುತ್ತು ಚಲವಾದಿ (27) ಎಂಬುವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಭಾನುವಾರ ರಾತ್ರಿ ಗದುಗಿನಲ್ಲಿ ನಡೆದಿದೆ.

ವಿವೇಕಾನಂದ ರಸ್ತೆಯ ನಿವಾಸಿಯಾದ ಮುತ್ತು ಅವರನ್ನು ನಗರದ ತೀಸ್‌ ಬಿಲ್ಡಿಂಗ್‌ ಬಳಿ ದುಷ್ಕರ್ಮಿಗಳು ಚಾಕುವಿನಿಂದ ಹಿರಿದು ಭೀಕರವಾಗಿ ಹತ್ಯೆ ಮಾಡಿದ್ದಾರೆ. ಕತ್ತು, ಎದೆ, ಹೊಟ್ಟೆ ಹಾಗೂ ತಲೆಯ ಭಾಗಕ್ಕೆ ಚಾಕುವಿನಿಂದ ಹಿರಿಯಲಾಗಿದೆ.

‘ಕೊಲೆಯಾದ ಮುತ್ತು ಮತ್ತು ಆತನ ಗೆಳೆಯನ ನಡುವೆ ಹಣಕಾಸಿನ ವ್ಯವಹಾರ ನಡೆದಿತ್ತು. ಇದೇ ಕಾರಣಕ್ಕೆ ಭಾನುವಾರ ರಾತ್ರಿ ಕೊಲೆ ನಡೆದಿದೆ. ಆರೋಪಿಗಳ ಪತ್ತೆಗೆ ಪೊಲೀಸರ ತಂಡ ರಚಿಸಲಾಗಿದ್ದು, ಶೀಘ್ರ ಬಂಧಿಸಲಾಗುವುದು’ ಎಂದು ಪೊಲೀಸ್‌ ಇನ್‌ಸ್ಪೆಕ್ಟರ್‌ ಪಂಚಾಕ್ಷರಿ ಸಾಲಿಮಠ ತಿಳಿಸಿದ್ದಾರೆ.

ADVERTISEMENT

ಘಟನೆ ನಡೆದ ಸ್ಥಳಕ್ಕೆ ಡಿವೈಎಸ್‌ಪಿ ಶಿವಾನಂದ ಪವಾಡಶೆಟ್ಟರ್‌ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. ಗದಗ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.