
ಮುಳಗುಂದ: ಇಲ್ಲಿನ ಬಜಾರನಲ್ಲಿರುವ ಧಾನ್ಯಗಳ ವ್ಯಾಪರಸ್ಥ ಸುನೀಲ ಬಸಪ್ಪ ಲಾಳಿ ಎಂಬುವರ ಅಂಗಡಿ ಮೇಲೆ ಮಂಗಳವಾರ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಅಂದಾಜು ₹20,362 ಮೌಲ್ಯದ 9 ಕ್ವಿಂಟಲ್ ಪಡಿತರ ಅಕ್ಕಿ ವಶಪಡಿಸಿಕೊಂಡಿದ್ದಾರೆ.
ಖಚಿತ ಮಾಹಿತಿ ಆಧರಿಸಿ ಗದಗ ಜಿಲ್ಲಾ ಆಹಾರ ಇಲಾಖೆ ಉಪನಿರ್ದೇಶಕ ಎಂ.ಎಸ್. ರಮೇಶ ಹಾಗೂ ತಂಡದವರು ದಾಳಿ ನಡೆಸಿದ್ದಾರೆ. ಈ ಕುರಿತು ಮುಳಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಗದಗ ತಾಲ್ಲೂಕು ಆಹಾರ ಇಲಾಖೆ ನಿರೀಕ್ಷಕ ಎಂ.ಎಸ್. ಹಿರೇಮಠ ಹಾಗೂ ಪೊಲೀಸ್ ಸಿಬ್ಬಂದಿ ಗಂಗಾಧರ ಕರಲಿಂಗಣ್ಣನವರ, ಗ್ರಾಮ ಲೆಕ್ಕಾಧಿಕಾರಿ ಪ್ರಿಯಾಂಕಾ ನರಗುಂದ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.