ಮುಂಡರಗಿ: ‘ಐಪಿಎಲ್ 18ನೇ ಆವೃತ್ತಿಯಲ್ಲಿ ಬೆಂಗಳೂರಿನ ಕ್ರಿಕೇಟ್ ತಂಡವು ಅಂತಿಮ ಹಣಾಹಣಿಯಲ್ಲಿ ಗೆಲುವು ಸಾಧಿಸಿದರೆ ಜೂನ್ 4ರಂದು ಸಾರ್ವಜನಿಕರಿಗೆ ಉಚಿತವಾಗಿ ಅವರ ಪೋಟೊಗಳನ್ನು ತೆಗೆದುಕೊಡಲಾಗುವುದು’ ಎಂದು ತಾಲ್ಲೂಕು ಛಾಯಾಗ್ರಾಹಕರ ಸಂಘದ ಮಾಜಿ ಕಾರ್ಯದರ್ಶಿ ಅಂದಾನಪ್ಪ ಕುರಡಗಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಂಗಳವಾರ ಮಾತನಾಡಿದ ಅವರು, ‘ಆರ್ಸಿಬಿ ತಂಡವು ಅಂತಿಮ ಪಂದ್ಯವನ್ನು ಗೆದ್ದರೆ ಜನರು ಹೇಳಿದ ಸೈಜ್ ಪೋಟೊಗಳನ್ನು ಉಚಿತವಾಗಿ ವಿತರಿಸಲಾಗುವುದು’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.