ADVERTISEMENT

₹15 ಸಾವಿರ ಗೌರವಧನಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 8 ಜುಲೈ 2023, 13:09 IST
Last Updated 8 ಜುಲೈ 2023, 13:09 IST
ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಬಳಿ ಶುಕ್ರವಾರ ರಾಜ್ಯ ಸಂಯುಕ್ತ ಅಂಗನವಾಡಿ ನೌಕರರ ಸಂಘದ ಜಿಲ್ಲಾ ಘಟಕದವರು ಪ್ರತಿಭಟನೆ ನಡೆಸಿದರು 
ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಬಳಿ ಶುಕ್ರವಾರ ರಾಜ್ಯ ಸಂಯುಕ್ತ ಅಂಗನವಾಡಿ ನೌಕರರ ಸಂಘದ ಜಿಲ್ಲಾ ಘಟಕದವರು ಪ್ರತಿಭಟನೆ ನಡೆಸಿದರು    

ಧಾರವಾಡ: ಅಂಗನವಾಡಿ ನೌಕರರ ಗೌರವಧನವನ್ನು ₹ 15 ಸಾವಿರಕ್ಕೆ ಹೆಚ್ಚಳ ಮಾಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸಂಯುಕ್ತ ಅಂಗನವಾಡಿ ನೌಕರರ ಸಂಘದ ಜಿಲ್ಲಾ ಘಟಕದವರು ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಸೇರಿದ ಪ್ರತಿಭಟನಾಕಾರರು, ಹಿಂದಿನ ಬಜೆಟ್‍ನಲ್ಲಿ ಘೋಷಿಸಿದ ಅಂಶಗಳನ್ನು ಜಾರಿಗೊಳಿಸಬೇಕು. ಗುಣಮಟ್ಟದ ಮೊಬೈಲ್ ಫೋನ್‌ ಒದಗಿಸಬೇಕು. ಇಂಟರ್‌ನೆಟ್ ಸೌಲಭ್ಯ ನೀಡಬೇಕು. ಹೆಚ್ಚುವರಿ ಕೆಲಸ ನೀಡಬಾರದು’ ಎಂದು ಆಗ್ರಹಿಸಿದರು.

ಸಂಘದ ಜಿಲ್ಲಾ ಘಟಕದ ಸಂಚಾಲಕಿ ಭುವನಾ ಬಳ್ಳಾರಿ ಮಾನತಾಡಿ, ‘ಕಾಂಗ್ರೆಸ್‌ ಆಡಳಿತ ಚುಕ್ಕಾಣಿ ಹಿಡಿದರೆ ಅಂಗನವಾಡಿ ನೌಕರರ ಗೌರವಧನವನ್ನು ₹ 15 ಸಾವಿರಕ್ಕೆ ಹೆಚ್ಚಿಸುವುದಾಗಿ ಮತ್ತು ನಿವೃತ್ತಿ ಪರಿಹಾರ ₹ 2 ಲಕ್ಷ ನೀಡುವುದಾಗಿ ಚುನಾವಣೆ ಸಂದರ್ಭದಲ್ಲಿ ಘೋಷಿಸಿತ್ತು. ಈ ಭರವಸೆ ಕಾರ್ಯಗತಗೊಳಿಸಲು ಕ್ರಮ ವಹಿಸಬೇಕು’ ಎಂದು ಒತ್ತಾಯಿಸಿದರು.

ADVERTISEMENT

ಕಸ್ತೂರಿ ಅಗಸಿಮನಿ, ಸರೋಜಾ ಹುಲಸೇರ,ಕವಿತಾ ಮಸೂತಿ, ರತ್ನಾ ಗಾಣಿಗೇರ, ಶ್ರೀದೇವಿ ತೇಗೂರ, ಚನ್ನಮ್ಮ ತಡಕೋಡ, ಮಂಜುಳಾ ಕಂಬಳಿ, ಶ್ರೀದೇವಿ ಹೂಗಾರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.