ಶಿರಹಟ್ಟಿ: ಗದಗ ಜಿಲ್ಲೆಯ ಬಳಗಾನೂರು ಗ್ರಾಮದಲ್ಲಿ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣನ ಮೂರ್ತಿ ತೆರವುಗೊಳಿಸಿರುವುದನ್ನು ಖಂಡಿಸಿ ತಾಲ್ಲೂಕು ಹಾಲುಮತ ಮಹಾಸಭಾದ ಸದಸ್ಯರು ತಹಶೀಲ್ದಾರ್ ಯಲ್ಲಪ್ಪ ಗೋಣ್ಣೆಣನವರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಈ ಕೂಡಲೇ ಜಿಲ್ಲಾಡಳಿತ ಬಳಗಾನೂರು ಗ್ರಾಮದಲ್ಲಿ ರಾಯಣ್ಣನ ಮೂರ್ತಿಯನ್ನು ಸ್ಥಾಪಿಸಿ ದೇಶಭಕ್ತರಿಗೆ ಗೌರವ ಸಲ್ಲಿಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು. ಪ್ರಸಾದ ಆಡಿನ, ಸಂತೋಷ ಕುರಿ, ಸೋಮನಗೌಡ, ಯಲ್ಲಪ್ಪ, ದೇವಪ್ಪ, ಶಿವಣ್ಣ, ಯಲ್ಲಪ್ಪ ಇಂಗಳಗಿ, ಚಂದ್ರು ಹಮ್ಮಿಗಿ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.