ನರೇಗಲ್: ಸಮೀಪದ ಮಾರನಬಸರಿ ಗ್ರಾಮದ ಕಂದಾಯ ಇಲಾಖೆಯ ಗ್ರಾಮಸೇವಕ ಕಳಕಪ್ಪ ಕುಷ್ಟಗಿಯವರು ಗದಗ ಜಿಲ್ಲಾಧಿಕಾರಿಗಳಿಂದ ಪ್ರಶಂಸನಾ ಪತ್ರ ಪಡೆದರು.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಆಧಾರ ಸೀಡಿಂಗ್ ಜುಲೈ 2024ರಲ್ಲಿ ಸಾರ್ವಜನಿಕರ ಪಹಣಿಗೆ ಆಧಾರ ಜೋಡಣೆ ಕಾರ್ಯದಲ್ಲಿ ಮಾರನಬಸರಿ ಗ್ರಾಮದ ಶೇ 92 ರಷ್ಟು ಪ್ರಗತಿ ಸಾಧಿಸಿ ಸಾರ್ವಜನಿಕರಿಗೆ ಸೇವೆಯನ್ನು ನೀಡುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಗದಗ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಗೋವಿಂದರಡ್ಡಿ ಅವರು ಪಂಶಸನಾ ಪತ್ರ ನೀಡಿ ಅಭಿನಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.