
ಲಕ್ಷ್ಮೇಶ್ವರ: ಶಾಸಕ ಡಾ.ಚಂದ್ರು ಲಮಾಣಿ ಅವರು ಪಟ್ಟಣದ ಮೇಲ್ಮಟ್ಟದ ಜಲಾಗಾರ, ಹಾಗೂ ಪೈಪ್ಲೈನ್ ಅಳವಡಿಸಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
‘ಕುಡಿಯುವ ನೀರು ಪೂರೈಕೆಯಲ್ಲಿ ವಿಳಂಬ ಕುರಿತು ಜನರಿಂದ ದೂರುಗಳು ಬರುತ್ತಿವೆ. ನೀರು ಪೂರೈಕೆಯಾಗದ ಕಾರಣ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಅಧಿಕಾರಿಗಳು ಈ ಕುರಿತು ಸೂಕ್ತ ಕ್ರಮಕೈಗೊಳ್ಳಬೇಕು. ನೀರು ಪೂರೈಸುವ ಸಿಬ್ಬಂದಿ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಇಲ್ಲದಿದ್ದರೆ ಅವರ ವಿರುದ್ಧ ಶಿಸ್ತು ಕ್ರಮಕೈಗೊಳ್ಳಲಾಗುವುದು’ ಎಂದರು.
ಈ ವೇಳೆ ಮುಖ್ಯಾಧಿಕಾರಿ ಮಹಾಂತೇಶ ಬೀಳಗಿ, ಮಂಜುನಾಥ ಮುದಗಲ್ಲ, ಬಸವಣ್ಣೆಪ್ಪ ನಂದೆಣ್ಣವರ, ನಿಂಗಪ್ಪ ಬನ್ನಿ, ಹನಮಂತಪ್ಪ ನಂದೆಣ್ಣವರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.