ಗಜೇಂದ್ರಗಡ: ಸಮೀಪದ ಜಿಗೇರಿ ಕೆರೆಯಲ್ಲಿ ಈಜಲು ಹೋಗಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಶನಿವಾರ ನಡೆದಿದೆ.
ಗಜೇಂದ್ರಗಡದ ನಿವಾಸಿ ಶಂಕರ ಬೆರಗಿ (26) ಮೃತಪಟ್ಟವರು. ಹೋಳಿ ಹಬ್ಬ ಮುಗಿಸಿಕೊಂಡು ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋಗಿದ್ದ ಶಂಕರ ಕೆರೆಯ ಹುದುಲಿನಲ್ಲಿ ಸಿಲುಕಿಕೊಂಡು ಮೃತಪಟ್ಟಿದ್ದಾನೆ. ಈ ಕುರಿತು ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.