ಹುಬ್ಬಳ್ಳಿ: ಮಾರ್ಚ್ 23ರಂದು ಮಧ್ಯಾಹ್ನ 3ಕ್ಕೆ ನಡೆಯಬೇಕಾಗಿದ್ದ ‘ಹುಬ್ಬಳ್ಳಿ ಜಗ್ಗಲಗಿ ಹಬ್ಬ’ವನ್ನು ಸಚಿವ ಸಿ.ಎಸ್. ಶಿವಳ್ಳಿ ನಿಧನದ ಹಿನ್ನೆಲೆಯಲ್ಲಿ ರದ್ದುಗೊಳಿಸಲಾಗಿದೆ ಎಂದು ಕಾರ್ಯಕ್ರಮದ ಆಯೋಜಕ ಮಹೇಶ ಟೆಂಗಿನಕಾಯಿ ತಿಳಿಸಿದ್ದಾರೆ.
ಪಿ.ಸಿ.ಜಾಬಿನ ಸೈನ್ಸ್ ಕಾಲೇಜಿನಲ್ಲಿ ಮಾ. 23ರಂದು ಏರ್ಪಡಿಸಿದ್ದ ಧಾರವಾಡ ವಿಭಾಗ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನವನ್ನೂ ಸಹ ಸಚಿವರ ನಿಧನದ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.