ADVERTISEMENT

ಅಪಘಾತ: ಮೂವರ ಸಾವು

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2012, 19:30 IST
Last Updated 11 ನವೆಂಬರ್ 2012, 19:30 IST

ಚನ್ನರಾಯಪಟ್ಟಣ: ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ಕ್ವಾಲಿಸ್ ವಾಹನ ರಸ್ತೆ ಪಕ್ಕಕ್ಕೆ ಉರುಳಿ ಇಬ್ಬರು ಪೊಲೀಸ್ ಕಾನ್‌ಸ್ಟೆಬಲ್‌ಗಳು ಸೇರಿದಂತೆ ಮೂವರು ಮೃತಪಟ್ಟು, ಮೂವರು ಗಾಯಗೊಂಡ ಘಟನೆ ತಾಲ್ಲೂಕಿನ  ಕಟ್ಟಿಗೆಹಳ್ಳಿ ಗೇಟ್ ಬಳಿ ಶನಿವಾರ ತಡರಾತ್ರಿ ನಡೆದಿದೆ.

ಬೆಂಗಳೂರಿನ ಮಹದೇವಪುರ ಪೊಲೀಸ್ ಠಾಣೆಯ ಅಶೋಕ್ (30) ಮತ್ತು ಮಹದೇವಸ್ವಾಮಿ (30) ಹಾಗೂ ಚರಣ್ (4) ಮೃತಪಟ್ಟವರು.

ಅಶೋಕ್ ಹಾಗೂ ಮಹದೇವಸ್ವಾಮಿ ಚಿಕಿತ್ಸೆಗಾಗಿ ಬೆಳ್ಳೂರಿನ ಆದಿಚುಂಚನಗಿರಿ ಆಸ್ಪತ್ರೆಗೆ ಸಾಗಿಸುವ  ಮಾರ್ಗಮಧ್ಯೆ ಮೃತಪಟ್ಟರೆ,  ಚರಣ್ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಬೆಳಿಗ್ಗೆ ಮೃತಪಟ್ಟಿದ್ದಾನೆ.

ಗಾಯಗೊಂಡಿರುವ ಕಾನ್‌ಸ್ಟೆಬಲ್‌ಗಳಾದ ಅಶ್ವತ್ಥ್‌ನಾರಾಯಣ್, ಸುರೇಶ್, ವಾಹನ ಚಾಲಕನಾದ  ಶರಣಪ್ಪ ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಲ್ಲೂಕಿನ ದಾಸಾಪುರದ ಚಂದ್ರಶೇಖರ್ ಬೆಂಗಳೂರಿನ ಮಹದೇವಪುರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅವರ ವಿವಾಹ  ಭಾನುವಾರ ಪಟ್ಟಣದಲ್ಲಿ ನಿಗದಿಯಾಗಿತ್ತು. ಅದರಲ್ಲಿ ಪಾಲ್ಗೊಳ್ಳಲು ಇವರೆಲ್ಲ ಬೆಂಗಳೂರಿನಿಂದ ಬರುತ್ತಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.