ADVERTISEMENT

ಅಪಘಾತ: 40 ಮಂದಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2017, 8:52 IST
Last Updated 21 ನವೆಂಬರ್ 2017, 8:52 IST

ಅರಸೀಕೆರೆ: ತಾಲ್ಲೂಕಿನ ಕಸಬಾ ಹೋಬಳಿ ಮೈಲನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಭಾನುವಾರ ರಾತ್ರಿ ಸಾರಿಗೆ ಸಂಸ್ಥೆಯ ಬಸ್‌ ಹಾಗೂ ಲಾರಿ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಚಾಲಕರು ಸೇರಿ 40 ಮಂದಿ ಪ್ರಯಾಣಿಕರು ಗಾಯಗೊಂಡರು.

ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್‌ ಹಾಗೂ ಸಿಮೆಂಟ್‌ ತುಂಬಿಕೊಂಡು ಅರಸೀಕೆರೆಗೆ ಬರುತ್ತಿದ್ದ ಲಾರಿ ನಡುವೆ ಮೈಲನಹಳ್ಳಿ ಬಳಿ ಮೊರಾರ್ಜಿ ವಸತಿ ಶಾಲೆ ಮುಂಭಾಗದ ತಿರುವಿನಲ್ಲಿ ಅಪಘಾತ ಸಂಭವಿಸಿದೆ.

ಅಪಘಾತದ ತೀವ್ರತೆಗೆ ಬಸ್‌ ಭಾಗಶಃ ಹಾಗೂ ಲಾರಿ ಪೂರ್ಣ ಜಖಂಗೊಂಡಿದೆ. ಪ್ರಯಾಣಿಕರು ಸೇರಿ 40ಮಂದಿಗೆ ಪೆಟ್ಟಾಗಿದ್ದು, ಅದೃಷ್ಟವಶಾತ್‌ ಸಾವು ಸಂಭವಿಸಿಲ್ಲ. ಗಾಯಾಳುಗಳನ್ನು ತಿಪಟೂರು ಆಸ್ಪತ್ರೆ, ಅರಸೀಕೆರೆ ಸರ್ಕಾರಿ ಜೆ.ಸಿ. ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಮೂವರನ್ನು ಜಿಲ್ಲಾ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.