ಹಾಸನ: ‘ಇಂಡಿಯಾ ಟುಡೇ ಕಾನ್ಕ್ಲೇವ್’ ಸಂಸ್ಥೆ ವತಿಯಿಂದ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಜಿಲ್ಲೆಗಳಿಗೆ ನೀಡುವ ಪ್ರಶಸ್ತಿಗೆ ಹಾಸನ ಜಿಲ್ಲೆ ಆಯ್ಕೆಯಾಗಿದೆ.
ಪ್ರಶಸ್ತಿಯನ್ನು ಮುಖ್ಯಮಂತ್ರಿ ಅವರು ಜಿಲ್ಲಾಧಿಕಾರಿಗೆ ಪ್ರದಾನ ಮಾಡುವರು. 2 ವರ್ಷಗಳಲ್ಲಿ ಜಿಲ್ಲೆಯ ಆರೋಗ್ಯಕ್ಕೆ ಸಂಬಂಧಿಸಿದ ಐದು ಅಂಶಗಳ ಆಧಾರದ ಸಮೀಕ್ಷೆಯಲ್ಲಿ ಮೂರರಲ್ಲಿ ಹೆಚ್ಚಿನ ಪ್ರಗತಿ ಸಾಧಿಸಿದ ಕಾರಣ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ತರಬೇತಿ ಹೊಂದಿದ ತಜ್ಞರಿಂದ ಹೆರಿಗೆ ಪ್ರಮಾಣ, ಎಚ್ಐವಿ ಮತ್ತು ಏಡ್ಸ್ ಬಗ್ಗೆ ಹೆಚ್ಚಿನ ಅರಿವು ಮೂಡಿಸಿರುವುದು, ಸೂಕ್ತ ವಯಸ್ಸಿನಲ್ಲಿ ಗರ್ಭಧಾರಣೆ ಮಾಡುವ ಶೇಕಡವಾರು ಪ್ರಮಾಣದಲ್ಲಿನ ಸಾಧನೆಗೆ ಈ ಪ್ರಶಸ್ತಿ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.