ADVERTISEMENT

ಕೋರಂ ಕೊರತೆ: ಸಭೆ ಮುಂದಕ್ಕೆ

ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಕಾಂಪೌಂಡ್‌ ನಿರ್ಮಾಣ

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2017, 7:07 IST
Last Updated 21 ಡಿಸೆಂಬರ್ 2017, 7:07 IST
ಶ್ರವಣಬೆಳಗೊಳ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿದ್ದ ಅಧ್ಯಕ್ಷರು, ಉಪಾಧ್ಯಕ್ಷರು, ಮತ್ತು ಇತರೆ 3 ಜನ ಸದಸ್ಯರುಗಳು.
ಶ್ರವಣಬೆಳಗೊಳ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿದ್ದ ಅಧ್ಯಕ್ಷರು, ಉಪಾಧ್ಯಕ್ಷರು, ಮತ್ತು ಇತರೆ 3 ಜನ ಸದಸ್ಯರುಗಳು.   

ಶ್ರವಣಬೆಳಗೊಳ: ಕೋರಂ ಕೊರತೆಯಿಂದ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯನ್ನು ಬುಧವಾರ ಮುಂದೂಡಲಾಯಿತು.

ಪಂಚಾಯಿತಿ ಸಭಾಂಗಣದಲ್ಲಿ ಬೆಳಿಗ್ಗೆ 11 ಗಂಟೆಗೆ ಸಭೆ ಆರಂಭವಾಗಬೇಕಿತ್ತು. 17 ಸದಸ್ಯರ ಪೈಕಿ ಅಧ್ಯಕ್ಷೆ ಹೇಮಾ ಪ್ರಭಾಕರ್‌, ಉಪಾಧ್ಯಕ್ಷ ಎಸ್‌.ಎನ್‌.ರವಿ, ಸದಸ್ಯರಾದ ಎಸ್‌.ಎನ್‌.ಲಕ್ಷ್ಮಣ್‌, ಎಸ್‌.ಎನ್‌.ಜನಾರ್ಧನ್‌ ಹಾಗೂ ಸರಸ್ವತಿ ಮಹೇಶ್‌ ಭಾಗವಹಿಸಿದ್ದರು.

ಅರ್ಧಕ್ಕಿಂತ ಹೆಚ್ಚು ಸದಸ್ಯರು ಸಭೆಗೆ ಗೈರಾಗಿದ್ದರಿಂದ ನಿಯಮದಂತೆ ಕೋರಂ ಕೊರತೆ ಕಾರಣ ನೀಡಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನವೀನ್‌ ಕುಮಾರ್‌ ಸಭೆ ಮುಂದೂಡಿದರು.

ADVERTISEMENT

ಸದಸ್ಯ ಎನ್‌.ಆರ್‌.ವಾಸು ಮಾತನಾಡಿ, ಮಹಾಮಸ್ತಕಾಭಿಷೇಕ ಸಮೀಪಿಸು ತ್ತಿರುವುದರಿಂದ ಪಟ್ಟಣ ವ್ಯಾಪ್ತಿಯ 7 ವಾರ್ಡ್‌ಗಳಲ್ಲಿ ಇದುವರೆಗೂ ಯಾವುದೇ ರೀತಿಯ ಕೆಲಸ ಕಾರ್ಯಗಳನ್ನು ಜಿಲ್ಲಾಡಳಿತ ಕೈಗೆತ್ತಿಕೊಳ್ಳದೇ ಇರುವುದರಿಂದ ಬೇಸತ್ತು ಸಭೆಗೆ ಗೈರಾಗಿದ್ದೇವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನವೀನ್‌ ಮಾತನಾಡಿ, ಮಸ್ತಕಾಭಿಷೇಕದ ಪ್ರಯುಕ್ತ ಪಟ್ಟಣದ ಘನ ತ್ಯಾಜ್ಯ ವಿಲೇವಾರಿಗೆ ಕೋರೇನಹಳ್ಳಿ ಬಳಿ 5 ಎಕರೆ ಸ್ಥಳವನ್ನು ಜಿಲ್ಲಾಡಳಿತ ಮಂಜೂರು ಮಾಡಿದೆ. ಅಂದಾಜು ₹ 50 ಲಕ್ಷ ವೆಚ್ಚದಲ್ಲಿ 5 ಎಕರೆಗೆ ಮೊದಲು ಕಾಂಪೌಂಡ್‌ ಕಾಮಗಾರಿಯನ್ನು ನಿರ್ಮಿತಿ ಕೇಂದ್ರದಿಂದ ನಿರ್ಮಿಸಲಾಗುವುದು ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.