ಚನ್ನರಾಯಪಟ್ಟಣ: ಪಟ್ಟಣದ ಆದರ್ಶನಗರದ ಶಿಕ್ಷಕರ ಮನೆಯ ಬೀಗವನ್ನು ಮಂಗಳವಾರ ಹಾಡಹಗಲೇ ಮುರಿದು ಒಳ ನುಗ್ಗಿರುವ ಕಳ್ಳರು ಬೀರುವಿನಲ್ಲಿದ್ದ ರೂ. 1.20 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳುವು ಮಾಡಿದ್ದಾರೆ.
ನಾಡನಹಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಎಂ.ಡಿ. ಕೃಷ್ಣೇಗೌಡ ಅವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಕೃಷ್ಣೇಗೌಡ ಅವರು ಶಾಲೆಗೆ ತೆರಳಿದ್ದರು. ಇವರ ಪತ್ನಿ ಮಂಜುಳಾ, ಮಧ್ಯಾಹ್ನ 1.45ಕ್ಕೆ ಮನೆಗೆ ಬೀಗ ಹಾಕಿಕೊಂಡು ಕಿಕ್ಕೇರಿ ಹೋಬಳಿ ಕಲ್ಲನಕಟ್ಟೆ ಗ್ರಾಮದಲ್ಲಿ ಸಂಬಂಧಿಕರೊಬ್ಬರ ಬೀಗರ ಔತಣ ಕೂಟಕ್ಕೆ ತೆರಳಿದ್ದರು. ಮಧ್ಯಾಹ್ನ 3.45ಕ್ಕೆ ಹಿಂದಿರುಗಿದರು. ಅಷ್ಟರಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿತು.
ಕಳ್ಳರು ಮನೆಯ ಬೀಗ ಮುರಿದಿದ್ದಾರೆ. ನಂತರ ಇಂಟರ್ಲಾಕ್ ಅನ್ನು ಕಬ್ಬಿಣದ ಸಲಾಕೆಯಿಂದ ಮೀಟಿ ಒಳ ನುಗ್ಗಿದ್ದಾರೆ. ಬೀರುವನ್ನು ಹೊಡೆದು ಹಾಕಿ 57 ಗ್ರಾಂ. ಚಿನ್ನಾಭರಣ, 450 ಗ್ರಾಂ. ಬೆಳ್ಳಿ ಆಭರಣ ಕಳ್ಳತನ ಮಾಡಲಾಗಿದೆ. ಮತ್ತೊಂದು ಕೊಠಡಿಯ ಬೀರು ತೆರೆದು ಅದರಲ್ಲಿದ್ದ 2 ಸಾವಿರ ರೂ. ನಗದು ಕದಿಯಲಾಗಿದೆ.
ಸ್ಥಳಕ್ಕೆ ಬೆರಳಚ್ಚು ತಜ್ಞರು, ಶ್ವಾನದಳ ಭೇಟಿ ನೀಡಿ ಪರಿಶೀಲಿಸಿತು. ಸಬ್ಇನ್ಸ್ಪೆಕ್ಟರ್ ಶಿವರಾಜ್ ಆರ್. ಮುಧೋಳ ಭೇಟಿ ನೀಡಿದರು.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.