ADVERTISEMENT

ವಚನ ಸಾಹಿತ್ಯದಿಂದ ಕನ್ನಡಕ್ಕೆ ಸ್ಥಾನಮಾನ

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2012, 19:30 IST
Last Updated 10 ಮಾರ್ಚ್ 2012, 19:30 IST
ವಚನ ಸಾಹಿತ್ಯದಿಂದ ಕನ್ನಡಕ್ಕೆ ಸ್ಥಾನಮಾನ
ವಚನ ಸಾಹಿತ್ಯದಿಂದ ಕನ್ನಡಕ್ಕೆ ಸ್ಥಾನಮಾನ   

ಹೊಳೆನರಸೀಪುರ: `ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ದೊರಕಿಸಿಕೊಟ್ಟಿದ್ದು ವಚನ ಸಾಹಿತ್ಯ~ ಎಂದು ಸಾಹಿತಿ ಡಾ. ಮಳಲಿ ವಸಂತಕುಮಾರ್ ನುಡಿದರು.

ತಾಲ್ಲೂಕು ವಚನ ಸಾಹಿತ್ಯ ಅಕಾಡೆಮಿ ಶನಿವಾರ ತಾಲ್ಲೂಕಿನ ಬಾಗೀವಾಳು ಗ್ರಾಮದಲ್ಲಿ ಆಯೋಜಿಸಿದ್ದ ಹಳೇಕೋಟೆ ಹೋಬಳಿ ಮಟ್ಟದ ವಚನ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

ವಚನಗಳಲ್ಲಿ ಕ್ರಾಂತಿ, ಸಂಸ್ಕೃತಿ, ಶಾಂತಿ, ಸಮಾಧಾನ ಎಲ್ಲವೂ ಇದೆ. ನೊಂದ ಮನಸ್ಸಿಗೆ ಸಮಾಧಾನ, ದಿಕ್ಕು ತಪ್ಪಿದವರಿಗೆ ಮಾರ್ಗದರ್ಶನ ಮಾಡುವ ಶಕ್ತಿ ವಚನಗಳಲ್ಲಿ ಅಡಕವಾಗಿದೆ ಎಂದರು.

ಸಮ್ಮೇಳನಾಧ್ಯಕ್ಷ ಬಾ.ರಾ. ಸುಬ್ಬರಾಯ ಮಾತನಾಡಿ, `ಬಸವಣ್ಣ, ಅಲ್ಲಮಪ್ರಭು, ಸಿದ್ದರಾಮ, ಅಂಬಿಗರ ಚೌಡಯ್ಯ, ದೇವರ ದಾಸಿಮಯ್ಯ, ಅಕ್ಕಮಹಾದೇವಿ, ಚನ್ನಬಸವಣ್ಣ ಮುಂತಾದವರ ವಚನಗಳು ಭೂಮಿ ಇರುವ ವರೆಗೂ ಜನರಿಗೆ ಮಾರ್ಗದರ್ಶನ ನೀಡುತ್ತವೆ~ ಎಂದರು.

ತಾಲ್ಲೂಕು ವಚನ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕುಮಾರ ಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಜಿಲ್ಲಾಧ್ಯಕ್ಷ ನಾಯಕರಹಳ್ಳಿ ಮಂಜೇಗೌಡ, ಜಿಲ್ಲಾ ಪಂಚಾಯಿತಿ ಸದಸ್ಯ ಎಚ್.ಎನ್. ದೇವೇಗೌಡ, ಬಿ.ಎನ್. ರಾಮಸ್ವಾಮಿ, ಮುಕುಂದೂರು ಮಠದ ಚನ್ನಪ್ಪಸ್ವಾಮೀಜಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಲಾಕ್ಷಿ, ಪುರಸಭಾಧ್ಯಕ್ಷೆ ವಿನೋದಾ, ಬಿಇಒ ಎನ್.ಕೆ.ಶಿವರಾಜು, ಶೇಖರ್, ಬಾಗೀವಾಳು ಬಸವರಾಜು, ಕೆ.ಬಿ. ವೆಂಕಟಸ್ವಾಮಿ, ಗುಂಜೇವು ಅಣ್ಣಾಜಪ್ಪ, ಮಲ್ಲೇಶ್, ಪುಟ್ಟಸೋಮಪ್ಪ ಇತರರು ಇದ್ದರು.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.