ಶ್ರವಣಬೆಳಗೊಳ : ಗೊಮ್ಮಟನಗರದಲ್ಲಿ ಡಿ. 30, 31ರಂದು ನಡೆಯಲಿರುವ ಕನ್ನಡ ಜೈನ ಸಾಹಿತ್ಯ ಸಮ್ಮೇಳನದ ಪ್ರಯುಕ್ತ ಶುಕ್ರವಾರ ಸಮ್ಮೇಳನಾಧ್ಯಕ್ಷರ ಮೆರವಣಿಗೆಯನ್ನು ಅದ್ಧೂರಿಯಾಗಿ ಮಾಡಲಾಯಿತು.
ಪಟ್ಟಣದ ವಿಂಧ್ಯಗಿರಿಯ ಬಾಹುಬಲಿ ಬೆಟ್ಟದ ಮುಂಭಾಗದಿಂದ ಕ್ಷೇತ್ರದ ಪೀಠಾಧಿಪತಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರು ಸರ್ವಾಧ್ಯಕ್ಷ ಬೆಳಗಾವಿಯ ಸಾಹಿತಿ ಜಿನದತ್ತ ದೇಸಾಯಿ ದಂಪತಿಗೆ ಹೂವಿನ ಹಾರ ಹಾಕಿ, ಸಾರೋಟ್ನಲ್ಲಿ ಕುಳ್ಳಿರಿಸಿ ಮೆರವಣಿಗೆಗೆ ಚಾಲನೆ ನೀಡಿದರು.
ಕಲಾ ತಂಡಗಳಾದ ಗಾಲಿ ವಾದನ, ಚಿಟ್ಟಿಮೇಳ, ಮೈಸೂರು ಬ್ಯಾಂಡ್ ಸೆಟ್, ಕನ್ನಡ ಮತ್ತು ಜೈನ ಧರ್ಮ ಧ್ವಜಗಳನ್ನು ಹಿಡಿದ ಬಾಲಕರು, ಕಲಶ ಹೊತ್ತ ಮಹಿಳೆಯರು, ಮಹಾ ಮಸ್ತಕಾಭಿಷೇಕ ಮಹೋತ್ಸವದ ಧರ್ಮ ಪ್ರಭಾವನಾ ರಥ, ಪ್ರತಿಷ್ಠಾಪಿಸಲ್ಪಟ್ಟ ಕಲಶವಿದ್ದ ವಾಹನ, ಮಂಗಳವಾದ್ಯ, ಸ್ಯಾಕ್ಸೋಫೋನ್ ವಾದನ ಮತ್ತು ಪೂರ್ಣ ಕುಂಭ ಕಲಶದೊಂದಿಗೆ ಸಾರ್ವಜನಿಕರು ಹೆಜ್ಜೆ ಹಾಕಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.