ADVERTISEMENT

ಹಾಸನದಲ್ಲಿ ಬಸ್‍ಗೆ ಬೆಂಕಿ: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ದುರಂತ

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2017, 6:58 IST
Last Updated 22 ನವೆಂಬರ್ 2017, 6:58 IST
ಹಾಸನದಲ್ಲಿ ಬಸ್‍ಗೆ ಬೆಂಕಿ: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ದುರಂತ
ಹಾಸನದಲ್ಲಿ ಬಸ್‍ಗೆ ಬೆಂಕಿ: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ದುರಂತ   

ಹಾಸನ : ತಾಂತ್ರಿಕ ದೋಷದಿಂದ ಬಸ್‌ಗೆ ಬೆಂಕಿ ತಗುಲಿ ಸುಟ್ಟು ಹೋಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕೆಂಚಟಹಳ್ಳಿ ಗ್ರಾಮದ ಬಳಿ ಅವಘಡ ಸಂಭವಿಸಿದೆ.

30ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿದ್ದರು.

ದುರ್ಗಾಂಬ ಟ್ರಾನ್ಸ್‌ಪೋರ್ಟ್‌ಗೆ ಸೇರಿದ ಸ್ಲೀಪರ್ ಕೋಚ್ ಬಸ್ ಇದಾಗಿದ್ದು ಮಂಗಳೂರು ಕಡೆಯಿಂದ ಬೆಂಗಳೂರಿಗೆ ತೆರಳುತಿತ್ತು. ಚಾಲಕ ತಕ್ಷಣ ಬಸ್ ಪಕ್ಕಕ್ಕೆ ನಿಲ್ಲಿಸಿದ್ದರಿಂದ ಯಾವುದೇ ಪ್ರಾಣಾಪಾಯ ಆಗಿಲ್ಲ.ಎಲ್ಲ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಗಿದೆ.ಹಾಸನ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.