ಹಾಸನ: ಜಿಲ್ಲೆಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ₹13 ಲಕ್ಷ ಬೆಲೆ ಬಾಳುವ 130 ಕೆ.ಜಿ. ಗಾಂಜಾ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಬಾಣಾವಾರ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಹಳ್ಳಿ ಗ್ರಾಮದಲ್ಲಿ ಸಂತೋಷ್ ಎಂಬಾತ ಇಟ್ಟಿಗೆ ಫ್ಯಾಕ್ಟರಿ ಹಿಂಭಾಗ 60*20 ಅಡಿ ವಿಸ್ತೀರ್ಣದ ಜಾಗದಲ್ಲಿ ಗಾಂಜಾ ಬೆಳೆದಿದ್ದ. ಖಚಿತ ಮಾಹಿತಿ ಮೇರೆಗೆ ತಹಶೀಲ್ದಾರ್ ಮತ್ತು ಪೊಲೀಸ್ ಸಿಬ್ಬಂದಿ ದಾಳಿ ನಡೆಸಿ ಅಪಾರ ಪ್ರಮಾಣದ ಗಾಂಜಾ ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ಬಂಧಿಸಿ, ತನಿಖೆ ಮುಂದುವರೆಸಿದ್ದಾರೆ.
ಕಾರ್ಯಾಚರಣೆಯಲ್ಲಿ ವೃತ್ತ ನಿರೀಕ್ಷಕ ಕೆ.ಎಂ. ವಸಂತ್, ಅರುಣ್ ಕುಮಾರ್, ಆನಂದ್ ಮತ್ತು ಸಿಬ್ಬಂದಿಗಳಾದ ಪ್ರಕಾಶ್, ಮೋಹನ್ ಕುಮಾರ್, ದಿಲೀಪ್ ಕುಮಾರ್, ನಾಗರಾಜ್, ಹೇಮಂತ್ ಕುಮಾರ್, ಹರೀಶ್, ಪುಟ್ಟಸ್ವಾಮಿ, ನಾಗ ರಾಜನಾಯ್ಕ, ದೇವರಾಯ ಹೂಗಾರ್ ಭಾಗವಹಿಸಿದ್ದರು.
ಗಾಂಜಾ ಬೆಳೆಯುತ್ತಿರುವವರು ಹಾಗೂ ಮಾದಕ ವಸ್ತು ಮಾರಾಟ ಮಾಡುವವರ ಬಗ್ಗೆ ಸಹಾಯವಾಣಿ 1908 ಕರೆಮಾಡಿ ಮಾಹಿತಿ ನೀಡಬಹುದು. ಮಾಹಿತಿದಾರರ ವಿವರವನ್ನು ಗೌಪ್ಯವಾಗಿ ಇಡಲಾಗುವುದು ಎಂದು ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.