ADVERTISEMENT

ಹಾಸನ: ವಿಧಾನ ಪರಿಷತ್‌ ಚುನಾವಣೆ ಕಣದಲ್ಲಿ ಉಳಿದ 4 ಅಭ್ಯರ್ಥಿಗಳು

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2021, 16:36 IST
Last Updated 26 ನವೆಂಬರ್ 2021, 16:36 IST

ಹಾಸನ: ವಿಧಾನ ಪರಿಷತ್‌ ಚುನಾವಣೆ ನಾಮಪತ್ರ ಹಿಂಪಡೆಯಲು ನಿಗದಿಪಡಿಸಿದ್ದ ಗಡುವು ಶುಕ್ರವಾರ ಕೊನೆಗೊಂಡಿದ್ದು, ಅಂತಿಮವಾಗಿ ನಾಲ್ವರು ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ.

ಹಾಸನ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುತ್ತಿರುವ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ಕಾಂಗ್ರೆಸ್‌ನ ಎಂ.ಶಂಕರ್‌, ಬಿಜೆಪಿಯ ಎಚ್.ಎಂ.ವಿಶ್ವನಾಥ್‌, ಜೆಡಿಎಸ್‌ನ ಆರ್‌.ಸೂರಜ್‌ ಹಾಗೂ ಪಕ್ಷೇತರ ಅಭ್ಯರ್ಥಿ ಎಚ್‌.ಡಿ.ರೇವಣ್ಣ ಪೈಕಿ ಯಾರೊಬ್ಬರೂ ಉಮೇದುವಾರಿಕೆ ಹಿಂಪಡೆಯಲಿಲ್ಲ.

ಈ ನಾಲ್ಕೂ ಮಂದಿ ನ.23ರಂದು ನಾಮಪತ್ರ ಸಲ್ಲಿಸಿದ್ದರು. 24ರಂದು ನಾಮಪತ್ರಗಳನ್ನುಪರಿಶೀಲಿಸಿದ ಜಿಲ್ಲಾ ಚುನಾವಣಾಧಿಕಾರಿಯು ಎಲ್ಲಾ ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಘೋಷಿಸಿದ್ದರು.ಉಮೇದುವಾರಿಕೆ ಹಿಂಪಡೆಯಲು ಎರಡು ದಿನ ಕಾಲಾವಕಾಶ ನೀಡಲಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.