ಹಾಸನ: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ಪ್ರಕರಣ ದಾಖಲಿಸಿರುವ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ), ಶುಕ್ರವಾರ ಬೆಳಿಗ್ಗೆ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮ ಕಚೇರಿಯ ಸಹಾಯಕ ಎಂಜಿನಿಯರ್ ಅಶ್ವಿನಿ ಅವರ ಮನೆ ಮತ್ತು ಕಚೇರಿ ಮೇಲೆ ದಾಳಿ ನಡೆಸಿದೆ.
ಡಿವೈಎಸ್ಪಿ ಕೃಷ್ಣಮೂರ್ತಿ ನೇತೃತ್ವದ ತಂಡ ಉದಯಗಿರಿಯಲ್ಲಿರುವ ನಿರ್ಮಾಣ ಹಂತದ ಅಶ್ವಿನಿ ಅವರ ಮನೆ, ಕಚೇರಿ ಹಾಗೂ ವಿದ್ಯಾನಗರದಲ್ಲಿರುವ ಅವರ ತಂದೆ ಮನೆ ಮೇಲೆ ದಾಳಿ ನಡೆಸಿ, ದಾಖಲೆ ಪತ್ರಗಳ ಪರಿಶೀಲನೆ ನಡೆಸಿತು.
ದಾಳಿ ವೇಳೆ ದೊರೆತ ಕೆಲ ದಾಖಲೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಹೆಚ್ಚಿನ ಮಾಹಿತಿ ನೀಡಲು ಅಧಿಕಾರಿಗಳು ನಿರಾಕರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.