ಆಲೂರು: ಕಸಬಾ ಹೋಬಳಿಯ ಕಂದಾಯ ನಿರೀಕ್ಷಕ ಹರೀಶ್ ಅವರು ಭ್ರಷ್ಟಾಚಾರ ನಿಗ್ರಹ (ಎಸಿಬಿ) ದಳದ ಬಲೆಗೆ ಬಿದ್ದಿದ್ದಾರೆ.
ವೃದ್ಧಾಪ್ಯ ವೇತನಕ್ಕೆ ಅರ್ಜಿ ಸಲ್ಲಿಸಿದ್ದ ಕಾಟಿಹಳ್ಳಿಯ ರಂಗನಾಥ್ ಅವರಿಗೆ ₹ 3000 ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಅರ್ಜಿದಾರರು ಹರೀಶ್ ಅವರಿಗೆ ಹಣ ನೀಡುವ ಸಂದರ್ಭದಲ್ಲಿ ನಿಗ್ರಹ ದಳದ ಮುಖ್ಯಸ್ಥ ಕೃಷ್ಣಮೂರ್ತಿ ಅವರ ತಂಡ ದಾಳಿ ಮಾಡಿ ಲಂಚದ ಹಣ ಸಮೇತ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಹರೀಶ್ ಹಲವು ವರ್ಷಗಳಿಂದ ಕಸಬಾ ಹೋಬಳಿಯಲ್ಲಿ ವೃತ್ತ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.