ADVERTISEMENT

ರಸ್ತೆ ಅಪಘಾತ: ನಾಲ್ವರು ಸಜೀವ ದಹನ 

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2019, 5:44 IST
Last Updated 21 ಫೆಬ್ರುವರಿ 2019, 5:44 IST
   

ಹಾಸನ: ರಸ್ತೆ ಬದಿಯ ಶೌಚಾಲಯಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 75ರ ಚನ್ನರಾಯಪಟ್ಟಣ ತಾಲ್ಲೂಕಿನಉದಯಪುರ ಬಳಿ ಈ ಅಪಘಾತ ಸಂಭವಿಸಿದೆ.

ಡಿಕ್ಕಿ ಹೊಡೆದ ರಭಸಕ್ಕೆ ಕಾರುಕ್ಷಣಾರ್ಧದಲ್ಲೇ ಹೊತ್ತಿ ಉರಿದಿದೆ.ಕಾರಿನಲ್ಲಿದ್ದ ನಾಲ್ವರ‌ ಪೈಕಿ ಮೂವರ ಸಜೀವ ದಹನವಾಗಿದ್ದರೆ. ಮತ್ತೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ.

ADVERTISEMENT

ಬೆಂಗಳೂರಿನಿಂದ ಹಾಸನ ಕಡೆಗೆ ಕಾರು ಹೋಗುತ್ತಿತ್ತು. ಬೆಂಗಳೂರಿನವಿವೇಕ್ ನಾಯಕ್ ಎಂಬುವರಿಗೆ ಸೇರಿದ ಕಾರು ಎಂದು ಪೊಲೀಸರು ಖಚಿತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.