ADVERTISEMENT

ವಿಂಧ್ಯಗಿರಿ ಮತ್ತು ಚಂದ್ರಗಿರಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2021, 19:44 IST
Last Updated 17 ಏಪ್ರಿಲ್ 2021, 19:44 IST
ಶ್ರವಣಬೆಳಗೊಳದ ಬೆಟ್ಟಕ್ಕೆ ಪ್ರವೇಶ ದ್ವಾರ
ಶ್ರವಣಬೆಳಗೊಳದ ಬೆಟ್ಟಕ್ಕೆ ಪ್ರವೇಶ ದ್ವಾರ   

ಶ್ರವಣಬೆಳಗೊಳ: ಇಲ್ಲಿಯ ವಿಂಧ್ಯಗಿರಿಯ ಬಾಹುಬಲಿಯ ದೊಡ್ಡಬೆಟ್ಟ ಮತ್ತು ಚಂದ್ರಗಿರಿಯ ಚಿಕ್ಕಬೆಟ್ಟಗಳಿಗೆ ಕೊರೊನಾ ವೈರಸ್‌ ಹರಡುವಿಕೆಯ ತಡೆಯುವ ಉದ್ದೇಶದಿಂದ ಸರ್ಕಾರದ ಸೂಚನೆಯ ಮೇರೆಗೆ ಪ್ರವಾಸಿಗರಿಗೆ ಮತ್ತು ಭಕ್ತರಿಗೆ ಪ್ರವೇಶವನ್ನು ಶನಿವಾರದಿಂದ (ಏ. 17ರಿಂದ) ಮೇ 15ರವರೆಗೆ ನಿರ್ಬಂಧಿಸಲಾಗಿದೆ.

ಶ್ರೀಕ್ಷೇತ್ರದಲ್ಲಿ ಏ. 25ರಂದು ನಡೆಸಬೇಕಾಗಿದ್ದ ಭಗವಾನ್‌ ಮಹಾವೀರ ಜಯಂತಿ ಆಚರಣೆಯನ್ನು ಹಾಗೂ ಏ.27ರಂದು ನಡೆಸಲಾಗುತ್ತಿದ್ದ ಭಗವಾನ್‌ ನೇಮಿನಾಥ ತೀರ್ಥಂಕರರ ಪಂಚಕಲ್ಯಾಣ ಮಹೋತ್ಸವ ಮತ್ತು ರಥೋತ್ಸವವನ್ನು ರದ್ದುಪಡಿಸಲಾಗಿದೆ ಎಂದು ಜೈನ ಮಠದ ಪೀಠಾಧಿಪತಿಗಳಾದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT