ADVERTISEMENT

ಅಪಘಾತ: ಗಂಡು ಚಿರತೆ ಸಾವು

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2019, 14:33 IST
Last Updated 20 ಅಕ್ಟೋಬರ್ 2019, 14:33 IST
20ಸಿ ಆರ್ ಪಿ4: ಚನ್ನರಾಯಪಟ್ಟಣ ತಾಲ್ಲೂಕು ಗೌಡಗೆರೆ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ರಾತ್ರಿ ವಾಹನ ಡಿಕ್ಕಿ ಹೊಡೆದ ಪರಿಣಾಮ ಎರಡುವರೆ ವರ್ಷದ ಗಂಡು ಚಿರತೆ ಮೃತಪಟ್ಟಿದೆ
20ಸಿ ಆರ್ ಪಿ4: ಚನ್ನರಾಯಪಟ್ಟಣ ತಾಲ್ಲೂಕು ಗೌಡಗೆರೆ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ರಾತ್ರಿ ವಾಹನ ಡಿಕ್ಕಿ ಹೊಡೆದ ಪರಿಣಾಮ ಎರಡುವರೆ ವರ್ಷದ ಗಂಡು ಚಿರತೆ ಮೃತಪಟ್ಟಿದೆ   

ಚನ್ನರಾಯಪಟ್ಟಣ: ತಾಲ್ಲೂಕಿನ ಗೌಡಗೆರೆ ಸಮೀಪ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ವಾಹನ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಎರಡೂವರೆ ವರ್ಷದ ಗಂಡು ಚಿರತೆ ಶನಿವಾರ ರಾತ್ರಿ ಸತ್ತಿದೆ.

ತಲೆಗೆ ಏಟು ಬಿದ್ದು ಸ್ಥಳದಲ್ಲಿ ಮೃತಪಟ್ಟಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದರು. ಚಿರತೆಯ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಪಟ್ಟಣದ ಹೊರವಲಯದಲ್ಲಿರುವ ಬೆಲಸಿಂದ ವನದಲ್ಲಿ ಭಾನುವಾರ ಹೂಳಲಾಯಿತು.

ಡಿಕ್ಕಿ ಹೊಡೆದ ವಾಹನದ ಬಗ್ಗೆ ಯಾವುದೇ ಮಾಹಿತಿ ತಿಳಿದಿಲ್ಲ ಎಂದು ಅರಣ್ಯಾಧಿಕಾರಿ ಹೇಮಂತ್ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.