ADVERTISEMENT

ಅಪಘಾತ: ಸೆಸ್ಕಾಂ ನೌಕರರ ಸಾವು

ನೇತ್ರದಾನ ಮಾಡಿ ಮಾನವೀಯತೆ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2021, 15:02 IST
Last Updated 23 ಸೆಪ್ಟೆಂಬರ್ 2021, 15:02 IST

ಹಾಸನ: ಬೇಲೂರು ರಸ್ತೆಯ ಕುಪ್ಪಳ್ಳಿ ಬಳಿ ಗುರುವಾರ ಬೈಕ್‌ಗೆ ಲಾರಿ ಡಿಕ್ಕಿ ಹೊಡೆದು ಸೆಸ್ಕ್‌ ನೌಕರ ಮೊಸಳೆ ಹೊಸಳ್ಳಿ ಹೋಬಳಿಯ ಕಲ್ಲೇನಹಳ್ಳಿಯ ಕೆ.ಟಿ.ಮೋಹನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೋಹನ್ ಮತ್ತು ನಟರಾಜ್ ಬೈಕ್‌ನಲ್ಲಿ ಹಾಸನ ಕಡೆಗೆ ಬರುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ಲಾರಿ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡ ಮೋಹನ್ ಅವರನ್ನು ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆಗೆ ಸ್ಪಂದಿಸಲಿಲ್ಲ. ಹಿಂಬದಿ ಸವಾರ ನಟರಾಜ್‌ಗೆ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೃತನಿಗೆ ಆರು ತಿಂಗಳ ಮಗುವಿದ್ದು, ಪತ್ನಿ ಹಾಗೂ ಸಂಬಂಧಿಗಳು ಮೋಹನ್ ಅವರ ಕಣ್ಣುಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮರೆದು ಇತರರಿಗೆ ಮಾದರಿಯಾಗಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.