
ಅರಸೀಕೆರೆ : ತಾಲೂಕು ಗಂಗಾಮತಸ್ಥರ ಸಂಘ ಹಾಗೂ ಅಂಬಿಗರ ಚೌಡಯ್ಯ ಸಂಘದ ವತಿಯಿಂದ ನಿಜ ಶರಣ ಅಂಬಿಗರ ಚೌಡಯ್ಯ ಅವರ ಜಯಂತಿಯನ್ನು ದಿನಾಂಕ 9ರ ಸೋಮವಾರದಂದು ನಗರದ ಗಂಗಾ ಪರಮೇಶ್ವರಿ ಸಮುದಾಯ ಭವನದಲ್ಲಿ ಅದ್ದೂರಿಯಾಗಿ ನೆರವೇರಿಸಲಾಗುತ್ತದೆ ಎಂದು ತಾಲೂಕು ಗಂಗಾಮತಸ್ಥರ ಸಂಘದ ಅಧ್ಯಕ್ಷ ಡಿ.ಲಕ್ಷ್ಮಣ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಗಂಗಾಮತಸ್ಥ ಸಮಾಜದ ಕುಲ ಗುರುಗಳಾದ ಅಂಬಿಗರ ಚೌಡಯ್ಯನವರು ಸಮ ಸಮಾಜದ ಚಿಂತಕರಾಗಿ ಬಸವಣ್ಣನವರ ಸಮಕಾಲೀನರಾಗಿ ಹಲವು ಮಹತ್ಕಾರ್ಯಗಳನ್ನು ಮಾಡಿದ್ದಾರೆ.
ಇಂತಹ ಇಂತಹ ಇಂತಹ ಇಂತಹ ಮಹಾಪುರುಚರ ಜಯಂತಿಯನ್ನು ಇಂತಹ ಮಹಾಪುರುಚರ ಜಯಂತಿಯನ್ನು ಇಂತಹ ಮಹಾಪುರುಚರ ಜಯಂತಿಯನ್ನು ಇಂತಹ ಮಹಾ ಪುರುಷರ ಜಯಂತಿಯನ್ನು ಆಚರಿಸಿ ಸ್ಮರಣೆ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ.
ನಗರದ ಎಪಿಎಂಸಿ ಬಳಿ ಶಿವಾನಂದ ಕಾಲೋನಿಯಲ್ಲಿರುವ ಶ್ರೀ ಗಂಗಾಪರಮೇಶ್ವರಿ ಸಮುದಾಯ ಭವನದಲ್ಲಿ ಬೆಳಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದ್ದು ಸಮಾಜ ಬಾಂಧವರು ಹಾಗೂ ಸಮಸ್ತ ನಾಗರಿಕರು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡಬೇಕೆಂದು ಹೇಳಿದರು.
ಈ ಸುಂದರ ಕಾರ್ಯಕ್ರಮವನ್ನು ಗೃಹ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಕೆ. ಎಂ.ಶಿವಲಿಂಗೇಗೌಡ ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ತಹಶೀಲ್ದಾರ್ ಸಂತೋಷ್ ಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಹಾಗೂ ಕುರುಬ ಸಮಾಜದ ಮುಖಂಡರು ಬಿಳಿ ಚೌಡಯ್ಯ, ಮಾಜಿ ನಗರಸಭಾ ಅಧ್ಯಕ್ಷ ಎಂ ಸಮಿವುಲ್ಲಾ, ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಧರ್ಮ ಶೇಖರ್, ಮಾಜಿ ತಾಲ್ಲೂಕು ಗಂಗಾಮತಸ್ಥರ ಸಂಘದ ಅಧ್ಯಕ್ಷ ಕೇಶವಮೂರ್ತಿ, ವಾಲ್ಮೀಕಿ ಸಮಾಜದ ಮುಖಂಡ ಹನುಮಪ್ಪ ಸೇರಿದಂತೆ ಇನ್ನಿತರರು ಭಾಗವಹಿಸಲಿದ್ದಾರೆ.
2024- 25 ನೇ ಸಾಲಿನ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ 85ಕ್ಕಿಂತ ಹೆಚ್ಚು ಅಂಕ ಪಡೆದ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು.
ಸಮಾಜದಲ್ಲಿ 80 ವರ್ಷ ತುಂಬಿದ ಹಿರಿಯ ನಾಗರಿಕರಿಗೆ ಸನ್ಮಾನಿಸಿ ಗೌರವಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತಾಲೂಕು ಗಂಗಾ ಮತಸ್ಥರ ಕಾರ್ಯಕಾರಿ ಮಂಡಳಿಯ ಸದಸ್ಯರುಗಳು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.