ಶ್ರವಣಬೆಳಗೊಳ: ಹೋಬಳಿಯ ಕಾಂತರಾಜುಪುರ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಅಮೃತಶಿಲ್ಪಾ ಶಿವರಾಜ್ ಅವಿರೋಧವಾಗಿ ಆಯ್ಕೆಯಾದರು.
ಹಿಂದಿನ ಅಧ್ಯಕ್ಷೆ ರತ್ನಮ್ಮ ದೇವರಾಜ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಅಮೃತಶಿಲ್ಪಾ ಒಬ್ಬರೇ ನಾಮ ಪತ್ರ ಸಲ್ಲಿಸಿದ್ದರು. ಚುನಾವಣಾಧಿಕಾರಿ ಇಒ ಹರೀಶ್ ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸಿ ಅವಿರೋಧ ಆಯ್ಕೆ ಪ್ರಕಟಿಸಿದರು.
ನೂತನ ಅಧ್ಯಕ್ಷೆ ಅಮೃತಶಿಲ್ಪಾ ಮಾತನಾಡಿ, ‘ಬಡವರು ಹಾಗೂ ದೀನದಲಿತರ ಸಮಸ್ಯೆಗಳ ಪರಿಹಾರಕ್ಕಾಗಿ ಶ್ರಮಿಸುತ್ತೇನೆ. ಪಕ್ಷಾತೀತ ನೆಲೆಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಹಂತ ಹಂತವಾಗಿ ಕೈಗೊಳ್ಳುತ್ತೇನೆ’ ಎಂದರು.
ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಪರಮ ದೇವರಾಜೇಗೌಡ, ಮಾಜಿ ಅಧ್ಯಕ್ಷ ಬರಾಳು ಮಹೇಂದ್ರ, ಕಾರ್ತಿಕ್, ಉಪಾಧ್ಯಕ್ಷೆ ಮಮತಾರಾಣಿ, ಮುಖಂಡರಾದ ವಡ್ಡರಹಳ್ಳಿ ರಾಜಣ್ಣ, ಶ್ರೀರಂಗ, ಸೂರಣ್ಣ, ಎಂ.ಎನ್.ಮಹೇಶ್, ಚಿಕ್ಕಬಿಳ್ತಿ ಗಂಗಾಧರ್, ಜಗದೀಶ್, ಎಂ.ಡಿ.ನಾರಾಯಣ್, ರವೀಶ್, ನಾಗೇಶ್, ಪ್ರಕಾಶ್, ಗುರು, ಕೃಪಾಕರ್, ಕೆ.ಟಿ.ಮಂಜುನಾಥ್, ನಟೇಶ್, ಸೋಮಣ್ಣ, ರವಿ, ದಮ್ಮನಿಂಗಳ ಶಂಕರ್, ಹಿರಿಬಿಳ್ತಿ ಮಂಜು, ಪಿಡಿಒ ಸುಮನ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.