ADVERTISEMENT

ಆಂಜನೇಯ ಸ್ವಾಮಿ ರಥೋತ್ಸವ

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2019, 19:50 IST
Last Updated 19 ಏಪ್ರಿಲ್ 2019, 19:50 IST
ಬಾಣಾವರ ಹೋಬಳಿ ತೊಂಡಿಗನಹಳ್ಳಿ ಗ್ರಾಮದಲ್ಲಿ ಆಂಜನೇಯ ಸ್ವಾಮಿ ರಥೋತ್ಸವ ನಡೆಯಿತು
ಬಾಣಾವರ ಹೋಬಳಿ ತೊಂಡಿಗನಹಳ್ಳಿ ಗ್ರಾಮದಲ್ಲಿ ಆಂಜನೇಯ ಸ್ವಾಮಿ ರಥೋತ್ಸವ ನಡೆಯಿತು   

ಬಾಣಾವರ: ಹೋಬಳಿಯ ತೊಂಡಿಗನ ಹಳ್ಳಿ ಗ್ರಾಮದ ಆಂಜನೇಯ ಸ್ವಾಮಿ ರಥೋತ್ಸವ ನಡೆಯಿತು.

ಮೂಲ ವಿಗ್ರಹಕ್ಕೆ ಅಭಿಷೇಕ, ಹೋಮ, ಅಂಕುರಾರ್ಪಣೆ, ಧ್ವಜಾ ರೋಹಣ, ಪಲ್ಲಕ್ಕಿ ಉತ್ಸವ, ಸೀತಾ ರಾಮ ಕಲ್ಯಾಣ, ಕುಂಕು ಮಾರ್ಚನೆ ನಡೆದವು.

ಹೂವುಗಳಿಂದ ಅಲಂಕರಿಸಿದ್ದ ರಥದಲ್ಲಿ ಸ್ವಾಮಿಯ ವಿಗ್ರಹ ಪ್ರತಿಷ್ಠಾಪಿಸಿದ ಬಳಿಕ ಮೆರವಣಿಗೆ ಮಾಡಲಾಯಿತು. ಭಕ್ತರು ರಥಕ್ಕೆ ಬಾಳೆಹಣ್ಣು, ದವನ ಎಸೆದು ಭಕ್ತಿ ಮೆರೆದರು.

ADVERTISEMENT

ತೊಂಡಗನಹಳ್ಳಿಯ ಪ್ರತಿ ಮನೆ ಮುಂದೆ ರಂಗೋಲಿ ಹಾಕಿ, ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ದೇವಾಲಯವನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಭಕ್ತರಿಗೆ ಪ್ರಸಾದ ವಿತರಿಸಲಾಯಿತು.

ತೊಂಡಿಗನಹಳ್ಳಿ, ಕೆಂಗುರುಬರ ಹಟ್ಟಿ, ಹಂಗುರುಬರಹಟ್ಟಿ, ಕೋಡಿ ಹಳ್ಳಿ, ಹನುಮನಹಳ್ಳಿ ಗ್ರಾಮಸ್ಥರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.