ADVERTISEMENT

ಅರಕಲಗೂಡು: ಚಿರತೆ ಸೆರೆ

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2023, 7:25 IST
Last Updated 25 ಮಾರ್ಚ್ 2023, 7:25 IST

ಅರಕಲಗೂಡು (ಹಾಸನ): ತಾಲ್ಲೂಕಿನ ಕಳ್ಳಿಮುದ್ದನಹಳ್ಳಿ ಗ್ರಾಮದಲ್ಲಿ ಹಲವು ದಿನಗಳಿಂದ ಪ್ರಾಣಿಗಳ ಮೇಲೆ ದಾಳಿ ನಡೆಸಿ, ಗ್ರಾಮಸ್ಥರಿಗೆ ಭಯವನ್ನುಂಟು ಮಾಡಿದ್ದ ಚಿರತೆ ಕೊನೆಗೂ ಶನಿವಾರ ಬೋನಿಗೆ ಬಿದ್ದಿದೆ.

ಕಳ್ಳಿ ಮುದ್ದನಹಳ್ಳಿ ಗ್ರಾಮದ ಜಮೀನುಗಳಿಗೆ ಆಗಾಗ್ಗೆ ನುಗ್ಗಿ ಹಸು, ಕುರಿ, ನಾಯಿ ಸೇರಿದಂತೆ ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸುತ್ತಿದ್ದ ಚಿರತೆಯ ಬಗ್ಗೆ ಮಾಹಿತಿ ಅರಿತ ಅರಣ್ಯ ಇಲಾಖೆ ಸಿಬ್ಬಂದಿ, ಚಿರತೆಯ ಸೆರೆಗೆ ಯೋಜನೆ ರೂಪಿಸಿದ್ದರು. ಲೋಕೇಶ್ ಎಂಬುವವರ ಜಮೀನಿನಲ್ಲಿ ಶುಕ್ರವಾರ ರಾತ್ರಿ ಬೋನು ಇಟ್ಟು ಚಿರತೆಯನ್ನು ಸೆರೆಹಿಡಿದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT