ADVERTISEMENT

ಕಿಡಿಗೇಡಿಗಳ ಬಂಧನಕ್ಕೆ ಭೀಮ್‌ ಆರ್ಮಿ ಒತ್ತಾಯ

ಜೀ ಕನ್ನಡ ವಾಹಿನಿ ಬ್ಯುಸಿನೆಸ್‌ ಹೆಡ್‌ಗೆ ಬೆದರಿಕೆ ಆರೋಪ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2020, 12:57 IST
Last Updated 5 ಸೆಪ್ಟೆಂಬರ್ 2020, 12:57 IST
ಸಂಪತ್‌ ಸುಬ್ಬಯ್ಯ
ಸಂಪತ್‌ ಸುಬ್ಬಯ್ಯ   

ಹಾಸನ: ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನಾಗಾಥೆ ಸಾರುವ ‘ಮಹಾನಾಯಕ’ ಧಾರಾವಾಹಿ ನಿಲ್ಲಿಸುವಂತೆ ಜೀ
ಕನ್ನಡ ವಾಹಿನಿ ಬ್ಯುಸಿನೆಸ್‌ ಹೆಡ್‌ ರಾಘವೇಂದ್ರ ಹುಣಸೂರು ಅವರಿಗೆ ಬೆದರಿಕೆ ಕರೆ ಮಾಡಿರುವ ಕಿಡಿಗೇಡಿಗಳನ್ನು ಶೀಘ್ರ ಬಂಧಿಸುವಂತೆ ದ್ರಾವಿಡ ಭೀಮ್ ಆರ್ಮಿ ಅಧ್ಯಕ್ಷ ಸಂಪತ್ ಸುಬ್ಬಯ್ಯ ಒತ್ತಾಯಿಸಿದರು.

ರಾಜ್ಯದ ಪ್ರತಿ ಹಳ್ಳಿ ಹಳ್ಳಿಗಳಲ್ಲೂ ಮಹಾನಾಯಕ ಧಾರಾವಾಹಿಯನ್ನು ಮೆಚ್ಚಿಕೊಂಡಿದ್ದಾರೆ. ಇದನ್ನು ಸಹಿಸದ ಕೆಲ ಪಟ್ಟಭದ್ರ ಹಿತಾಸಕ್ತಿಗಳು ಕಿಡಿಗೇಡಿ ಕೃತ್ಯ ಮಾಡುತ್ತಿರುವುದು ಖಂಡನೀಯ. ಸಮಾಜದಲ್ಲಿ ಸಾಮರಸ್ಯ ಕದಡುವ ಕೃತ್ಯಕ್ಕೆ ಕೈ ಹಾಕಿರುವ ಕಿಡಿಗೇಡಿಗಳನ್ನು ಶೀಘ್ರ ಬಂಧಿಸುವಂತೆ ಶನಿವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.

ಯಾರ ಒತ್ತಡಕ್ಕೂ ಮಣಿಯದೆ ಧಾರಾವಾಹಿ ಪ್ರಸಾರವನ್ನು ಮುಂದುವರಿಸಬೇಕು. ರಾಜ್ಯ ಸರ್ಕಾರ ವಾಹಿನಿ ಕಚೇರಿ ಮತ್ತು ಅದರ ಮುಖ್ಯಸ್ಥರಿಗೆ ಸೂಕ್ತ ಭದ್ರತೆ ನೀಡಬೇಕು. ಅಂಬೇಡ್ಕರ್ ಅನುಯಾಯಿಗಳು ಹಾಗೂ ಅಭಿಮಾನಿಗಳು, ಎಲ್ಲಾ ಸಂಘಟನೆಗಳು ಮಹಾನಾಯಕ ಧಾರಾವಾಹಿ ಪರ ನಿಲ್ಲಬೇಕು ಎಂದು ಮನವಿ ಮಾಡಿದರು.

ADVERTISEMENT

ಗೋಷ್ಟಿಯಲ್ಲಿ ದ್ರಾವಿಡ ಭೀಮ್ ಆರ್ಮಿ ಜಿಲ್ಲಾಧ್ಯಕ್ಷ ಪ್ರಸಾದ್ ಎಚ್.ಆರ್., ಸದಸ್ಯರಾದ ಮಂಜು, ಶರತ್, ಅರಸೀಕೆರೆ ಟಿಪ್ಪು ಸುಲ್ತಾನ್ ವೇದಿಕೆ ತಾಲ್ಲೂಕು ಘಟಕದ ಅಧ್ಯಕ್ಷ ಮೊಹಮದ್ ಫಯಾಜ್, ಶಶಿಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.