ಸಕಲೇಶಪುರ: ರಸ್ತೆಯ ಗುಂಡಿ ತಪ್ಪಿಸಲು ಹೋಗಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಎದುರು ಬರುತ್ತಿದ್ದ ಬೈಕ್ಗೆ ನೇರವಾಗಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ತಾಲ್ಲೂಕಿನ ಬಾಗೆ ಸಮೀಪ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.
ಬೇಲೂರು ತಾಲ್ಲೂಕು ಅಂಕಿಹಳ್ಳಿ ಗ್ರಾಮದ ಪ್ರದೀಪ್ (23) ಮೃತಪಟ್ಟ ಯುವಕ.
ಪಟ್ಟಣದಿಂದ ಊರಿಗೆ ಹೋಗುತ್ತಿದ್ದಾಗ ಕೊಡ್ಲಿಪೇಟೆ ಕಡೆಯಿಂದ ಬರುತ್ತಿದ್ದ ಬಸ್ ಡಿಕ್ಕಿ ಹೊಡೆದಿದೆ. ತಲೆಗೆ ತೀವ್ರ ಪೆಟ್ಟು ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾರ್ವಜನಿಕರ ಆಕ್ರೋಶ: ರಾಷ್ಟ್ರೀಯ ಹೆದ್ದಾರಿ 75ರ ಹಾಸನ ಬಿ.ಸಿ. ರೋಡ್ ನಡುವಿನ ಚತುಷ್ಪಥ ರಸ್ತೆ ಕಾಮಗಾರಿ ನನೆಗುದಿಗೆ ಬಿದ್ದಿರುವುದರಿಂದಾಗಿ ಸಕಲೇಶಪುರ ಹಾಸನ ನಡುವಿನ ರಸ್ತೆ ಸಂಪೂರ್ಣ ಗುಂಡಿ ಬಿದ್ದು ಹಾಳಾಗಿದೆ. ಪ್ರದೀಪ್ ಸಾವಿಗೆ ರಸ್ತೆಯ ಗುಂಡಿಯೇ ಕಾರಣ ಎಂದು ಸಾರ್ವಜನಿಕರು ಆರೋಪಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.