ADVERTISEMENT

ಹೊಳೆನರಸೀಪುರದಲ್ಲಿ ಬಿಜೆಪಿಯಿಂದ ಭವಾನಿ ಕಣಕ್ಕಿಳಿಸುವ ಆಸೆ: ಸಿ.ಟಿ.ರವಿ

​ಪ್ರಜಾವಾಣಿ ವಾರ್ತೆ
Published 27 ಜನವರಿ 2023, 22:45 IST
Last Updated 27 ಜನವರಿ 2023, 22:45 IST
   

ಚಿಕ್ಕಮಗಳೂರು: ‘ಹಾಸನ ಜಿಲ್ಲೆಯ ಹೊಳೆನರಸೀಪುರ ಕ್ಷೇತ್ರದಲ್ಲಿ ಸ್ಪರ್ಧಿಸಲು ಭವಾನಿ ಹೊರತು ಅತ್ಯುತ್ತಮ ಅಭ್ಯರ್ಥಿ ಬೇರಾರೂ ಇಲ್ಲ, ಬಿಜೆಪಿಯಿಂದ ಕಣಕ್ಕಿಳಿಯುವಂತೆ ಅವರನ್ನು ಆಹ್ವಾನಿಸುವ ಮನಸ್ಸಿತ್ತು. ಆದರೆ, ಭವಾನಿ ಅಕ್ಕ ಮತ್ತು ಎಚ್‌.ಡಿ.ರೇವಣ್ಣ ನಡುವೆ ಜಗಳ ಹಚ್ಚಬಾರದು ಎಂದು ಹೇಳಿಲ್ಲ’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಕಿಚಾಯಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಹಾಸನದಲ್ಲಿ ಸ್ಪರ್ಧೆಗೆ ಸಂಬಂಧಿಸಿದಂತೆ ಜೆಡಿಎಸ್‌ ಪಕ್ಷದ ಎಚ್‌.ಡಿ. ಕುಮಾರಸ್ವಾಮಿ ಮತ್ತು ಭವಾನಿ ಹೇಳಿಕೆಗಳನ್ನು ಗಮನಿಸಿದ್ದೇನೆ. ಅವರ ಮನೆಯಲ್ಲಿ ಜಗಳ ಹಚ್ಚಲು ನಾನು ಬಯಸಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT