ADVERTISEMENT

ಸರ್ಕಾರ ಉರುಳುವ ಬಗ್ಗೆ ದೇವೇಗೌಡರಿಗೆ ಮಾಹಿತಿ ನೀಡಿದ್ದ ರೋಷನ್‌ ಬೇಗ್‌: ರೇವಣ್ಣ

ರೋಷನ್‌ ಬೇಗ್‌ ಸಜ್ಜನ ರಾಜಕಾರಣಿ ಎಂದ ರೇವಣ್ಣ

​ಪ್ರಜಾವಾಣಿ ವಾರ್ತೆ
Published 16 ನವೆಂಬರ್ 2019, 13:49 IST
Last Updated 16 ನವೆಂಬರ್ 2019, 13:49 IST
ಶಾಸಕ ಎಚ್‌.ಡಿ ರೇವಣ್ಣ ಮತ್ತು ಮಾಜಿ ಸಚಿವ ರೋಷನ್‌ ಬೇಗ್‌
ಶಾಸಕ ಎಚ್‌.ಡಿ ರೇವಣ್ಣ ಮತ್ತು ಮಾಜಿ ಸಚಿವ ರೋಷನ್‌ ಬೇಗ್‌    

ಹೊಳೆನರಸೀಪುರ: ‘ಸಮ್ಮಿಶ್ರ ಸರ್ಕಾರವನ್ನು ಬೀಳಿಸಲು ಷಡ್ಯಂತ್ರ ನಡೆಯುತ್ತಿದೆ ಎಂದು ರೋಷನ್‌ಬೇಗ್ ಮೊದಲೇ ದೇವೇಗೌಡರಿಗೆ ತಿಳಿಸಿ‌ದ್ದರು,’ ಶಾಸಕ ಎಚ್‌.ಡಿ ರೇವಣ್ಣ ಅವರು ತಿಳಿಸಿದ್ದಾರೆ.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಮ್ಮಿಶ್ರ ಸರ್ಕಾರವನ್ನು ಬೀಳಿಸಲು ಷಡ್ಯಂತ್ರ ನಡೆಯುತ್ತಿದೆ ಎಂದು ರೋಷನ್‌ಬೇಗ್ ಮೊದಲೇ ದೇವೇಗೌಡರಿಗೆ ತಿಳಿಸಿ‌ದ್ದರು. ಅವರೊಬ್ಬ ಸಜ್ಜನ ರಾಜಕಾರಣಿ. ಅವರನ್ನು ಕಾಂಗ್ರೆಸ್‌ ಸರಿಯಾಗಿ ನಡೆಸಿಕೊಳ್ಳದ ಕಾರಣ ಸ್ವಾಭಿಮಾನಿಯಾದ ಅವರು ಕಾಂಗ್ರೆಸ್‌ನಿಂದ ಅಂತರ ಕಾಯ್ದುಕೊಂಡಿದ್ದಾರೆ. ಅವರ ಬಗ್ಗೆ ನನಗೆ ಅಪಾರ ಗೌರವ ಇದೆ. ಅವರು ನಮ್ಮ ಪಕ್ಷಕ್ಕೆ ಬರುವುದಾದರೆ ಸ್ವಾಗತಿಸುತ್ತೇವೆ’ ಎಂದರು.

‘ಸಿದ್ಧಾಂತ ಇಲ್ಲದ ಬಿಜೆಪಿಯಿಂದ ನಾವು ಪಾಠ ಕಲಿಯಬೇಕಿಲ್ಲ. ಉಪಚುನಾವಣೆಯ ನಂತರ ಬಿಜೆಪಿಗೆ ಸಂಕಷ್ಟ ಆರಂಭವಾಗಲಿದೆ. ಜನ ಬುದ್ಧಿ ಕಲಿಸಲು ಸಜ್ಜಾಗಿದ್ದಾರೆ ಎಂದು ಶಾಸಕ ಎಚ್‌.ಡಿ. ರೇವಣ್ಣ ಹೇಳಿದರು.

ADVERTISEMENT

‘ದೇವೇಗೌಡರು ಮತ್ತು ಕುಮಾರಸ್ವಾಮಿಯಿಂದ ರಾಜಕೀಯ ಬದುಕು ಕಟ್ಟಿಕೊಂಡವರೇ ಇಂದು ಟೀಕಿಸುತ್ತಿದ್ದಾರೆ. ಇವರಿಗೆಲ್ಲಾ ನಾವು ನಂಬಿರುವ ದೇವರೇ ಬುದ್ಧಿ ಕಲಿಸುತ್ತಾನೆ,’ ಎಂದರು.

‘ಹೊಸಕೋಟೆಯಲ್ಲಿ ಶರತ್‌ ಬಚ್ಚೇಗೌಡರಿಗೆ ಬೆಂಬಲ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ,’ ಎಂದು ಇದೇ ವೇಳೆ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.