
ಪ್ರಜಾವಾಣಿ ವಾರ್ತೆ
ಹಾಸನ: ಹೊಳೆನರಸೀಪುರ ತಾಲ್ಲೂಕಿನ ಚಾಕೇನಹಳ್ಳಿ ಕಟ್ಟೆ ಗ್ರಾಮದ ಸ್ಫೋಟಕ ಸಂಗ್ರಹಿಸುವ ಗೋದಾಮಿನ ಬಳಿ, ಜಿಲೆಟಿನ್ ಸ್ಫೋಟಿಸಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತೊಬ್ಬ ಕಾರ್ಮಿಕ ನಟರಾಜ್, ಗುರುವಾರ ಬೆಂಗಳೂರಿನಲ್ಲಿ ಮೃತಪಟ್ಟಿದ್ದಾರೆ. ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ ಮೂರಕ್ಕೇರಿದೆ. ಗೋದಾಮು ಮಾಲೀಕ ನಾಗೇಶ್ ಅವರನ್ನು ಗುರುವಾರ ಬಂಧಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.