ಹಾಸನ: ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಮಾಡುವುದು ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಹೈಕಮಾಂಡ್ಗೆ ಬಿಟ್ಟ ವಿಚಾರ. ಪಕ್ಷದ ಮೇಲೆ ವಿಶ್ವಾಸವಿದ್ದು ಯಾರಿಗೂ ಅನ್ಯಾಯವಾಗುವುದಿಲ್ಲ ಎಂದು ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಹೇಳಿದರು.
ಹಾಸನಾಂಬೆ ದರ್ಶನ ಪಡೆದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಯಡಿಯೂರಪ್ಪ ಆಡಳಿತವನ್ನು ರಾಜ್ಯದ ಜನತೆ ಒಪ್ಪಿದ್ದಾರೆ ಎಂಬುದಕ್ಕೆ ಉಪ ಚುನಾವಣೆಯ ಫಲಿತಾಂಶವೇ ಸಾಕ್ಷಿ. ಆರ್.ಆರ್. ನಗರದಲ್ಲಿ ನಾನೂ ಒಬ್ಬ ಅಭ್ಯರ್ಥಿ ಎಂಬ ರೀತಿಯಲ್ಲಿ ಕೆಲಸ ಮಾಡಿದ್ದೇನೆ. 2018ರ ಚುನಾವಣೆಯಲ್ಲೇ ಬಿಜೆಪಿ 80 ಸಾವಿರ ಮತ ಗಳಿಸಿತ್ತು. ಮುನಿರತ್ನ ಅವರ ಮಾನವೀಯತೆಗೆ ಮತದಾರರು ಬೆಂಬಲ ನೀಡಿದ್ದಾರೆ ಎಂದು ತಿಳಿಸಿದರು.
ಸಾಮೂಹಿಕವಾಗಿ ಕೆಲಸ ಮಾಡಿದ ಪರಿಣಾಮ ಎರಡೂ ಕ್ಷೇತ್ರಗಳಲ್ಲಿ ಹೆಚ್ಚಿನ ಅಂತರದಲ್ಲಿ ಗೆಲುವು ಸಾಧಿಸಿದ್ದೇವೆ. ನಾಲ್ಕು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲೂ ಬಿಜೆಪಿ ಗೆಲುವು ಸಾಧಿಸಿದೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.