
ಹೊಳೆನರಸೀಪುರ: ರಾಷ್ಟ್ರೀಯ ಹೆದ್ದಾರಿ ಗುತ್ತಿಗೆದಾರರು ಹಾಗೂ ಇಲಾಖೆಯ ಎಂಜಿನಿಯರ್ಗಳ ಬೇಜವಾಬ್ದಾರಿಯಿಂದ ಸಾರ್ವಜನಿಕರಿಗೆ, ವಾಹನಗಳ ಚಾಲಕರಿಗೆ ತೀವ್ರ ತೊಂದರೆ ಆಗುತ್ತಿದ್ದು, ಜನರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಚನ್ನಾಂಬಿಕ ವೃತ್ತದಿಂದ ಕನಕಭವನದವರೆಗೆ ಹೊಳೆನರಸೀಪುರದಿಂದ ಚನ್ನರಾಯಪಟ್ಟಣ ಹಾಗೂ ಹಾಸನ ಸಂಪರ್ಕಿಸುವ ರಸ್ತೆಯನ್ನು₹29 ಕೋಟಿ ವೆಚ್ಚದಲ್ಲಿ ಕಾಂಕ್ರೀಟೀಕರಣಕ್ಕಾಗಿ ಎರಡೂ ಬದಿಯಲ್ಲಿ ಬಾಕ್ಸ್ ಚರಂಡಿ ಕಾಮಗಾರಿ ನಡೆಯುತ್ತಿದೆ. ರಸ್ತೆಯಲ್ಲಿ ವಾಹನಗಳು ಸಂಚರಿಸದಂತೆ ಮಣ್ಣು ಸುರಿದು ಬಂದ್ ಮಾಡಿದ್ದಾರೆ.
ರಸ್ತೆ ಬಂದ್ ಮಾಡಿದ ಗುತ್ತಿಗೆದಾರರು, ಚನ್ನರಾಯಪಟ್ಟಣಕ್ಕೆ ಹೋಗಲು ಬದಲಿ ರಸ್ತೆ ಯಾವುದು ಎಂದು ಫಲಕ ಹಾಕದ ಕಾರಣ ಚಾಲಕರು ತೊಂದರೆ ಅನುಭವಿಸುತ್ತಿದ್ದಾರೆ. ಚನ್ನರಾಯಪಟ್ಟಣಕ್ಕೆ ಸಾಗುವ ರಸ್ತೆ ಹುಡುಕಲು ಸುತ್ತಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಚನ್ನರಾಯಪಟ್ಟಣಕ್ಕೆ ಹೋಗಲು ತೊಂದರೆ ಅನುಭವಿಸುತ್ತಿದ್ದರೂ, ಮಾರ್ಗಸೂಚಿ ಫಲಕ ಹಾಕಿಸಬೇಕಾದ ಹೆದ್ದಾರಿ ಪ್ರಾಧಿಕಾರದ ಎಂಜಿನಿಯರ್ಗಳು ಇದಕ್ಕೂ ನಮಗೂ ಸಂಬಂಧವೇ ಇಲ್ಲ ಎನ್ನುವಂತೆ ವರ್ತಿಸುತ್ತಿದ್ದಾರೆ ಎಂದು ಪಟ್ಟಣದ ಸತೀಶ್ ದೂರಿದರು.
ಈ ಬಗ್ಗೆ ಮಾಹಿತಿಗಾಗಿ ಹೆದ್ದಾರಿ ವಿಭಾಗದ ಎಂಜಿನಿಯರ್ ನಾಗವೇಣಿ ಅವರಿಗೆ ಕರೆ ಮಾಡಿದರೂ ಸ್ವೀಕರಿಸಲಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.