ಹಾಸನ: ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ದರ ಕಡಿಮೆ ಆಗಿರುವುದರಿಂದ ತಾಲ್ಲೂಕು ಮತ್ತು ಜಿಲ್ಲಾಪಂಚಾಯಿತಿ ಚುನಾವಣೆ ನಡೆಸಬೇಕು ಎಂದು ರಾಜ್ಯ ಚುನಾವಣಾ ಆಯೋಗವನ್ನು ಶಾಸಕಎಚ್.ಡಿ.ರೇವಣ್ಣ ಆಗ್ರಹಿಸಿದರು.
ಚುನಾವಣೆ ಪ್ರಕ್ರಿಯೆ ಗ್ರಾಮೀಣ ಭಾಗದಲ್ಲಿ ನಡೆಯಲಿದೆ. ಪ್ರಚಾರ ನಿಷೇಧಿಸಿ, ಬೂತ್ಗಳ ಸಂಖ್ಯೆ ಹೆಚ್ಚಿಸಿ,15 ರಿಂದ 20 ದಿನಗಳ ಒಳಗೆ ಚುನಾವಣೆ ಪ್ರಕ್ರಿಯೆ ಪೂರ್ಣಗೊಳಿಸಬಹುದು. ಚುನಾಯಿತ ಪ್ರತಿನಿಧಿಗಳುಆಡಳಿತ ನಡೆಸಬೇಕಾದ ಕಡೆ ಅಧಿಕಾರಿಶಾಹಿ ನಡೆಸುವುದು ಸರಿಯಲ್ಲ ಎಂದು ಸೋಮವಾರಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಚುನಾವಣೆ ನಡೆಸುವುದು ಬೇಕಾಗಿಲ್ಲ. ಅವಧಿ ಮುಗಿದು 6 ತಿಂಗಳ ಒಳಗೆಚುನಾವಣೆ ನಡೆಸಬೇಕು. ಈಗಾಗಲೇ 4 ತಿಂಗಳಾಗಿದೆ. ಕಲಬುರ್ಗಿ, ಹುಬ್ಬಳ್ಳಿ–ಧಾರವಾಡ, ಬೆಳಗಾವಿಮಹಾನಗರ ಪಾಲಿಕೆಗೆ ಚುನಾವಣೆ ಘೋಷಿಸಲಾಗಿದೆ. ಅದೇ ರೀತಿ ತಾಲ್ಲೂಕು ಮತ್ತು ಪಂಚಾಯಿತಿಗೆಚುನಾವಣೆ ನಡೆಸಬೇಕು ಎಂದು ಒತ್ತಾಯಿಸಿದರು.
ಆರ್ಡಿಪಿಆರ್ ಇಲಾಖೆ ಜಿಲ್ಲಾ ಪಂಚಾಯಿತಿಗಳಿಗೆ ₹ 1,296 ಕೋಟಿ ಅನುದಾನ ನೀಡಿದೆ. ಅದನ್ನುಆಡಳಿತಾಧಿಕಾರಿಗಳು ಬಿಜೆಪಿ ಶಾಸಕರಿಗೆ ಹಂಚಿಕೆ ಮಾಡುತ್ತಿದ್ದಾರೆ. ಎಲ್ಲ ಕ್ಷೇತ್ರದ ಶಾಸಕರಿಗೂಸಮಾನವಾಗಿ ಹಂಚಿಕೆ ಮಾಡಬೇಕು ಎಂದರು.
ಸೆಪ್ಟೆಂಬರ್ ತಿಂಗಳಲ್ಲಿ ಕೋವಿಡ್ 3ನೇ ಅಲೆ ಆರಂಭವಾಗಲಿದೆ ಎಂದು ತಜ್ಞರು ಮುನ್ಸೂಚನೆ ನೀಡಿದ್ದಾರೆ.3ನೇ ಅಲೆ ಜಿಲ್ಲೆಗೆ ಕಾಲಿಡುವ ಮೊದಲೇ ಪ್ರಾಥಮಿಕ, ಸಮುದಾಯ ಆರೋಗ್ಯ ಕೇಂದ್ರ, ತಾಲ್ಲೂಕು ಹಾಗೂಜಿಲ್ಲಾ ಆಸ್ಪತ್ರೆಗೆ ಅಗತ್ಯ ಸೌಕರ್ಯಗಳನ್ನು ಒದಗಿಸಬೇಕು ಎಂದು ಸಿ.ಎಂ ಬಸವರಾಜ ಬೊಮ್ಮಾಯಿಹಾಗೂ ಆರೋಗ್ಯ ಸಚಿವರಿಗೆ ಮನವಿ ಮಾಡಿದ್ದಾರೆ.
ಜಿಲ್ಲಾಧಿಕಾರಿ ಕೂಡಲೇ ಜಿಲ್ಲೆಯ ಎಲ್ಲಾ ಶಾಸಕರು, ಅಧಿಕಾರಿಗಳ ಸಭೆ ಕರೆಯಬೇಕು. ಜಿಲ್ಲೆಯಲ್ಲಿ ಇಂದಿಗೂನಿತ್ಯ 95 ಕ್ಕೂ ಹೆಚ್ಚು ಪಾಸಿಟಿವ್ ಪತ್ತೆಯಾಗುತ್ತಿದೆ. 3 ರಿಂದ 4 ಜನ ಮೃತಪಡುತ್ತಿದ್ದಾರೆ. ಮತ್ತೊಮ್ಮೆಜಿಲ್ಲೆಯ ಎಲ್ಲರನ್ನು ಆರ್ಟಿ–ಪಿಸಿಆರ್ ಪರೀಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.