ADVERTISEMENT

ಹಾಸನ ಕ್ಷೇತ್ರದಿಂದ ಸ್ಪರ್ಧಿಸುವೆ: ಬಾಗೂರು ಮಂಜೇಗೌಡ

ಕಾಂಗ್ರೆಸ್‌ ಮುಖಂಡ ಬಾಗೂರು ಮಂಜೇಗೌಡ

​ಪ್ರಜಾವಾಣಿ ವಾರ್ತೆ
Published 12 ನವೆಂಬರ್ 2020, 14:10 IST
Last Updated 12 ನವೆಂಬರ್ 2020, 14:10 IST
ಬಾಗೂರು ಮಂಜೇಗೌಡ
ಬಾಗೂರು ಮಂಜೇಗೌಡ   

ಹಾಸನ: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ಕಾಂಗ್ರೆಸ್
ಮುಖಂಡ ಬಾಗೂರು ಮಂಜೇಗೌಡ ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಒಂಬತ್ತು ವರ್ಷ ಆರ್‌ಟಿಒ ಅಧಿಕಾರಿಯಾಗಿದ್ದ ನಾನು
ಕ್ಷೇತ್ರದ ಜನರ ನಾಡಿ ಮಿಡಿತ ಅರಿತಿದ್ದೇನೆ. ಮೂಲ ಸಮಸ್ಯೆಗಳೇನು ಎಂಬುದರ ಬಗ್ಗೆ ಮಾಹಿತಿ ಇದೆ. 2018ರಲ್ಲಿಯೂ ಈ ಕ್ಷೇತ್ರದಿಂದಲೇ ಟಿಕೆಟ್‌ ಕೇಳಿದ್ದೆ. ಆದರೆ ಹೈಕಮಾಂಡ್‌ ಹೊಳೆನರಸೀಪುರದಿಂದ ಸ್ಪರ್ಧಿಸಲು ಸೂಚಿಸಿತ್ತು’ ಎಂದರು.

‘ಈ ಬಾರಿ ಹಾಸನ ಕ್ಷೇತ್ರವೇ ಆದ್ಯತೆ ಆಗಿದ್ದು, ಈಗಿನಿಂದಲೇ ಪಕ್ಷ ಸಂಘಟನೆ ಮಾಡುತ್ತಿದ್ದೇನೆ. ನಗರದಲ್ಲೇ ಮನೆ ಹಾಗೂ ಕಚೇರಿ ಮಾಡಿಕೊಂಡಿದ್ದೇನೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೂ ಮನದಾಸೆ ಹೇಳಿದ್ದೇನೆ. ಹಿರಿಯ ನಾಯಕ ಸಿದ್ದರಾಮಯ್ಯ ಅವರಿಗೂ ಮನವರಿಕೆ ಮಾಡಿದ್ದೇನೆ’ ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.